ಮಿತಿ ಮೀರಿದ ಬೈಕ್ ಕಳ್ಳರ ಹಾವಳಿ: ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಜನ ಒತ್ತಾಯ

ದೊಡ್ಡಬಳ್ಳಾಪುರ: ನಗರದಲ್ಲಿ ಬೈಕ್ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಜನಸಂದಣಿ ಇರುವ ಪ್ರದೇಶಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಕ್ ಮಾಡಿರುವ ಬೈಕ್‌ಗಳನ್ನು ಟಾರ್ಗೆಟ್ ಮಾಡುತ್ತಿರುವ ಖದೀಮರು ನಿರಂತರವಾಗಿ ಕಳ್ಳತನ ನಡೆಸುತ್ತಿರುವ ಘಟನೆಗಳು ವರದಿಯಾಗುತ್ತಿವೆ.

ನಗರದ ಬಸವಭವನ ಸಮೀಪದ ಎಸ್‌ಎಲ್‌ವಿ ಲಾಡ್ಜ್ ಬಳಿ ಏಪ್ರಿಲ್ 9ರಂದು ರಾತ್ರಿ ಸುಮಾರು 8:39ರ ವೇಳೆಗೆ ಪಲ್ಸರ್ ಬೈಕ್ ನಿಲ್ಲಿಸಿ ಫಾಕ್ಸ್‌ಕಾನ್ ಕಂಪನಿಗೆ ಕೆಲಸಕ್ಕೆ ತೆರಳಿದ್ದ ಬೈಕ್ ಮಾಲೀಕ, ರಾತ್ರಿ ಪಾಳಿ ಕೆಲಸ ಮುಗಿಸಿ ಬೆಳಗ್ಗೆ ವಾಪಸ್ ಬಂದಾಗ ಬೈಕ್ ನಾಪತ್ತೆಯಾಗಿರುವುದು ಗೊತ್ತಾಗಿದೆ. ಈ ಸಂಬಂಧ ಮೇ 15ರಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಬೈಕ್ ಕದ್ದ ಆರೋಪಿಯು ಬಸವಭವನ ಪ್ರದೇಶದಿಂದ ದಾಬಸ್‌ಪೇಟೆ ಮಾರ್ಗವಾಗಿ ತುಮಕೂರು ಕಡೆಗೆ ತೆರಳಿರುವುದು ಬೆಳಕಿಗೆ ಬಂದಿದೆ. ಸದ್ಯ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ನಗರ ಠಾಣಾ ಪೊಲೀಸ್ ಸಿಬ್ಬಂದಿ ಕಳ್ಳನ ಜಾಡು ಹಿಡಿದು ದಾಬಸ್ ಪೇಟೆ, ಕ್ಯಾತಸಂದ್ರ, ತುಮಕೂರು, ಹಿರಿಯೂರು, ಚಿತ್ರದುರ್ಗ, ದಾವಣಗೆರೆ ಬಾರ್ಡರ್ ವರೆಗೂ ಹೋಗಿದ್ದಾರೆ.‌ ಆದರೆ, ಚಾಲಾಕಿ ಕಳ್ಳ ಇನ್ನೂ ಪತ್ತೆಯಾಗಿರುವುದಿಲ್ಲ. ಆದರೆ, ಪೊಲೀಸರು ಕಳ್ಳನ ಪತ್ತೆಯಲ್ಲಿ ಕಾರ್ಯನಿರತರಾಗಿದ್ದಾರೆ…

ನಗರದಲ್ಲಿ ಪದೇಪದೇ ಬೈಕ್ ಕಳ್ಳತನ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ನಗರದ ಪ್ರಮುಖ ರಸ್ತೆ, ವೃತ್ತ, ಕಚೇರಿ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ಬೈಕ್ ಕಳ್ಳರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

 

ವಿಶೇಷ ಸೂಚನೆ

ಎಲ್ಲೆಂದರಲ್ಲಿ ದ್ವಿಚಕ್ರ ವಾಹನಗಳನ್ನು ಪಾರ್ಕ್ ಮಾಡದೇ ನಿಗದಿತ ಪಾರ್ಕಿಂಗ್ ಸ್ಥಳದಲ್ಲಿ ಮಾತ್ರ ವಾಹನಗಳನ್ನು ನಿಲುಗಡೆ ಮಾಡಿದರೆ ಕಳ್ಳತನವನ್ನು ತಡೆಗಟ್ಟಬಹುದು.

Ramesh Babu

Journalist

Recent Posts

ಜೆಡಿಎಸ್ ಬಣ ಗುದ್ದಾಟದಲ್ಲಿ ಕಾರ್ಯಕರ್ತರಿಗೆ ಸಿಕ್ಕ ‘ಸ್ಮೈಲ್ ಕ್ಯಾಪ್ಟನ್ ಆನಂದ್’

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 40 ವರ್ಷಗಳಿಂದ ರಾಜಕಾರಣ ಮಾಡುತ್ತಾ, ಮನೆ ಮಾತಾಗಿರುವ ಹುಸ್ಕೂರು ಟಿ. ಆನಂದ್ ಜೆಡಿಎಸ್ ಪಕ್ಷದಲ್ಲಿ ರಾಜ್ಯ ಪ್ರಧಾನ…

7 hours ago

ವೇಶ್ಯಾವಾಟಿಕೆ ಜಗತ್ತಿನ ಹಳೆಯದಾದ ಒಂದು ಕ್ರಿಯೆ…?

ವೇಶ್ಯಾವಾಟಿಕೆ...... ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ…

7 hours ago

ಮಳೆಗಾಲ ಆರಂಭ: ರಸ್ತೆಗುಂಡಿಗಳ ದರ್ಬಾರ್: ಟೋಲ್ ತಪ್ಪಿಸಲು ಹಳ್ಳಿ ರಸ್ತೆಗಳ ಬಳಕೆ: ಜನರ ಜೀವದ ಜೊತೆ ಚೆಲ್ಲಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ದೊಡ್ಡಬಳ್ಳಾಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳ ರಸ್ತೆಗುಂಡಿಗಳ ಸಮಸ್ಯೆ ಮತ್ತೆ ತಲೆದೋರಿದ್ದು, ವಾಹನ ಸವಾರರು ಜೀವ…

8 hours ago

ಬೈಕ್ – ಕಾರಿನ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…

19 hours ago

ಕೃಷಿ ಚಟುವಟಿಕೆಯಲ್ಲಿ ರೈತರು ಡಿಎಪಿ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ…

22 hours ago

KSRTC ಬಸ್-ಕಂಟೇನರ್ ಲಾರಿ ನಡುವೆ ಅಪಘಾತ; ಕೆಲವರಿಗೆ ಗಾಯ

ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…

1 day ago