ಮಿತ್ರ ಪಕ್ಷದ ಜೊತೆ ಸಮನ್ವಯ ಸಾಧಿಸುವಲ್ಲಿ ಡಾ.ಕೆ.ಸುಧಾಕರ್ ನಿರತ

ವಿಕಸಿತ ಭಾರತ ನಿರ್ಮಿಸುವ ಗುರಿಯೊಂದಿಗೆ ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯಾಗಿಸಲು ರಾಜ್ಯಾದ್ಯಂತ ಚುರುಕಿನ ಚುನಾವಣಾ ಪ್ರಚಾರ ನಡೆಯುತ್ತಿದೆ. ಆದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವಿರುವ ಬಯಲುಸೀಮೆ ಭಾಗದಲ್ಲಿ ಚುನಾವಣಾ ಪ್ರಚಾರದೊಂದಿಗೆ ಬಿರುಸಿನ ರಾಜಕೀಯ ಚಟುವಟಿಕೆ ನಡೆದಿದೆ. ಈ ಬಾರಿ ಬಿಜೆಪಿ-ಜೆಡಿಎಸ್‌ ಮೈತ್ರಿ ಗಟ್ಟಿಯಾಗಿದ್ದು, ಅಭ್ಯರ್ಥಿ ಮಾಜಿ ಸಚಿವ ಡಾ.ಕೆ.ಸುಧಾಕರ್‌ ಅವರನ್ನು ಸಂಸದರಾಗಿಸಲು ಮುಖಂಡರು ಹಾಗೂ ಕಾರ್ಯಕರ್ತರು ಒಕ್ಕೊರಲ ವಿಶ್ವಾಸವನ್ನು ತೋರಿಸಿದ್ದಾರೆ.

ಕಳೆದ ಭಾನುವಾರ ಟಿಕೆಟ್ ಘೋಷಣೆಯಾದಾಗಿನಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ ನಡೆಸುತ್ತಿರುವ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್, ಮಿತ್ರ ಪಕ್ಷಗಳ ನಡುವೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತಿದ್ದಾರೆ. ಕಳೆದ ಒಂದು ವಾರದಿಂದ ಡಾ.ಕೆ.ಸುಧಾಕರ್ ಅವರು ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಮನೆಗಳಿಗೆ ಖುದ್ದು ಭೇಟಿ ನೀಡಿ ಸಹಕಾರ ಕೋರಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನೂ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಜೆಡಿಎಸ್ ಪ್ರಭಾವ ಹೆಚ್ಚಿರುವ ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲದಲ್ಲಿ ಸೋಮವಾರ ಸಮನ್ವಯ ಸಭೆ ನಡೆಯಲಿದ್ದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉಪಸ್ಥಿತರಿರಲಿದ್ದಾರೆ. ಈಗಾಗಲೇ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಡಾ.ಕೆ.ಸುಧಾಕರ್‌ ಅವರನ್ನು ಅಭ್ಯರ್ಥಿಯಾಗಿಸಲು ಸಂಪೂರ್ಣ ಸಹಕಾರ  ನೀಡಿದ್ದು, ಸಹಯೋಗದಲ್ಲಿ ಕಾರ್ಯನಿರ್ವಹಿಸುವ ಸಂದೇಶ ನೀಡಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಇತ್ತೀಚೆಗೆ ಸಭೆ ನಡೆಸಿದ ಡಾ.ಕೆ.ಸುಧಾಕರ್‌, ಅಭಿವೃದ್ಧಿಯ ರಾಜಕಾರಣ, ದೇಶದ ಭದ್ರತೆ ಹಾಗೂ ಯುವಜನರ ಬದುಕು ರೂಪಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವ ಗುರಿಯೊಂದಿಗೆ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ನನಗೆ ಮತ್ತು ದೊಡ್ಡಬಳ್ಳಾಪುರಕ್ಕೆ ಅವಿನಾಭಾವ ಸಂಬಂಧವಿರುವುದರಿಂದ ಇದು ನನಗೆ ಹೊಸ ಕ್ಷೇತ್ರವಲ್ಲ. ಈ ಕ್ಷೇತ್ರದಲ್ಲಿ ಅನೇಕ ಹಿರಿಯ ನಾಯಕರಿದ್ದಾರೆ. ಅವರೆಲ್ಲರ ಸಹಕಾರ ಪಡೆದಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಸಭೆ ನಡೆಸಿ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಗಿದೆ. ಹಿರಿಯ ನಾಯಕ ಎಂಟಿಬಿ ನಾಗರಾಜ್‌ ಹಾಗೂ ಶಾಸಕ ಧೀರಜ್‌ ಮುನಿರಾಜು ಅವರ ನಾಯಕತ್ವದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚು ಮತ ಗಳಿಸಲು ಸಾಧ್ಯವಾಗಲಿದೆ. ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಕೂಡ ಗೆಲ್ಲಿಸುವ ಭರವಸೆ ನೀಡಿದ್ದಾರೆ.

ಅಭಿವೃದ್ಧಿಯ ಭರವಸೆ

ಈಗಾಗಲೇ ವೈದ್ಯಕೀಯ ಮತ್ತು ಆರೋಗ್ಯ ಸಚಿವರಾಗಿ ಕೋವಿಡ್‌ನಂತಹ ಸಾಂಕ್ರಾಮಿಕವನ್ನೂ ನಿಭಾಯಿಸಿದ ಅನುಭವವಿರುವ ಹಾಗೂ ಶಾಸಕರಾಗಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಅಭಿವೃದ್ಧಿಯ ಸ್ಪರ್ಶ ನೀಡಿರುವ ಡಾ.ಕೆ.ಸುಧಾಕರ್‌, ಸಂಸದರಾಗಿ ತಮ್ಮ ಕ್ಷೇತ್ರವನ್ನು ವಿಕಸಿತ ಕ್ಷೇತ್ರವನ್ನಾಗಿಸುವ ಪಣ ತೊಟ್ಟಿದ್ದಾರೆ.

ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲವನ್ನು ಬೆಂಗಳೂರಿಗೆ ಉಪನಗರಗಳಾಗಿ ಬೆಳೆಸುವುದು ಅವರ ಗುರಿ. ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳು ಅರೆಬರೆಯಾಗಿ ಜಾರಿಯಾಗಿರುವುದರಿಂದ ಅನುದಾನವೇ ಇಲ್ಲದೆ ಅಭಿವೃದ್ದಿ ಶೂನ್ಯವಾಗಿದೆ. ಆದ್ದರಿಂದ ಈ ಬಾರಿಯೂ ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿಸಿ ಬಯಲುಸೀಮೆ ಭಾಗದಲ್ಲಿ ಬಿಜೆಪಿ-ಜೆಡಿಎಸ್‌ ಪಕ್ಷವನ್ನು ಅಧಿಕಾರಕ್ಕೆ ತಂದು ಅಭಿವೃದ್ಧಿಗೆ ಮರು ಚಾಲನೆ ನೀಡಬೇಕೆಂದು ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ದೆಹಲಿಗೆ ಪರ್ಯಾಯವಾಗಿ ನೋಯ್ಡಾ ಇರುವಂತೆ ಬೆಂಗಳೂರಿಗೆ ಪರ್ಯಾಯವಾಗಿ ದೇವನಹಳ್ಳಿಯನ್ನು ಬೆಳೆಸುವ ಗುರಿ ಡಾ.ಕೆ.ಸುಧಾಕರ್‌ ಅವರದ್ದು. ಹಾಗೆಯೇ ಹೊಸಕೋಟೆ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲವನ್ನು ಉಪನಗರಗಳಾಗಿ ಅಭಿವೃದ್ಧಿಪಡಿಸಲಾಗುತ್ತದೆ. ನನ್ನನ್ನು ಆಯ್ಕೆ ಮಾಡಿದರೆ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಸಹಾಯಕವಾಗುತ್ತದೆ. ಕಾಂಗ್ರೆಸ್‌ಗೆ ಮತ ಹಾಕಿದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧ್ಯವಾಗುವುದಿಲ್ಲ ಎಂದು ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಯಾವುದೇ ರಸ್ತೆ, ಸೇತುವೆ ನಿರ್ಮಿಸಿಲ್ಲ. ಎಲ್ಲಿಯೂ ಅಭಿವೃದ್ಧಿ ನಡೆಯುತ್ತಿಲ್ಲ. ಇದನ್ನು ಜನರಿಗೆ ತಿಳಿಸಬೇಕಿದೆ. ಜೆಡಿಎಸ್‌ ಜೊತೆ ಸಮನ್ವಯ ತಂಡಗಳನ್ನು ರಚಿಸಿ, ಪ್ರತಿ ಹಂತದಲ್ಲೂ ತಂಡಗಳನ್ನು ರಚಿಸಿ ಕೆಲಸ ಮಾಡಬೇಕು. ಬಿಜೆಪಿ-ಜೆಡಿಎಸ್‌ ಒಳಗೊಂಡ ಬೃಹತ್‌ ಪ್ರಚಾರ ಸಭೆಯನ್ನೂ ನಡೆಸಬೇಕಿದೆ ಎಂದು ಅವರು ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

Ramesh Babu

Journalist

Recent Posts

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

6 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

9 hours ago

Instant Play Casino

Instant play casinos allow you to play casino games online without installing any software. These…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

1 day ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

1 day ago

Facharbeit Schreiben_ Ein Leitfaden für Schüler und Studenten(2)

Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…

1 day ago