ಮಿಷನ್ ಇಂದ್ರಧನುಷ್ 5.0 3ನೇ ಸುತ್ತಿನ ಲಸಿಕಾಕರಣ ಗುರಿ ತಲುಪಲು ಕ್ರಮ ವಹಿಸಿ:ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್

2023 ರ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮದ ಭಾಗವಾಗಿ ಮೂರನೇ ಸುತ್ತಿನ ಲಸಿಕಾಕರಣ ಅಕ್ಟೋಬರ್  9 ರಿಂದ 15 ರವರಿಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಶೇಕಡ 100 ರಷ್ಟು ಗುರಿ ತಲುಪಲು ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಮಿಷನ್ ಇಂದ್ರಧನುಷ್ 5.0 ಮೂರನೇ ಸುತ್ತಿನ ಲಸಿಕಾಕರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2023 ರ ಮಿಷನ್ ಇಂದ್ರಧನುಷ್ 5.0 ಎರಡನೇ ಸುತ್ತಿನ ಲಸಿಕಾಕರಣ ಪ್ರಗತಿ ಪರಿಶೀಲನೆ ನಡೆಸಿದ ಅವರು ಯು.ವಿನ್(U-WIN) ತಂತ್ರಾಂಶದ ವರದಿಯಂತೆ ಸೆಪ್ಟೆಂಬರ್ 11 ರಿಂದ 16 ರವರೆಗೆ ನಡೆದ ಎರಡನೇ ಸುತ್ತಿನ ಲಸಿಕಾಕರಣದಲ್ಲಿ ಜಿಲ್ಲೆಯಲ್ಲಿ ಐದು ವರ್ಷದ ಒಳಗಿನ 2340 ಮಕ್ಕಳಿಗೆ ಹಾಗೂ 644 ಗರ್ಭಿಣಿ ಮಹಿಳೆಯರಿಗೆ ಲಸಿಕೆಯನ್ನು ನೀಡಲಾಗಿದೆ. ಎರಡನೇ ಸುತ್ತಿನಲ್ಲಿ ಶೇಕಡ 100 ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಲಾಗಿದೆ ಎಂದರು.

2023ರ ಮಿಷನ್ ಇಂದ್ರಧನುಷ್ 5.0 ಮೂರನೇ ಸುತ್ತಿನಲ್ಲಿ ಲಸಿಕಾಕರಣ ಕ್ಯಾಂಪ್ ಮಾಡುವ ಮುಂಚಿತವಾಗಿ ಹೆಚ್ಚು ಪ್ರಚಾರ ಮಾಡಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ದಿನಾಂಕವನ್ನು ತಿಳಿಸಬೇಕು.

ವಲಸೆ ಪ್ರದೇಶಗಳಲ್ಲಿ, ನಗರದ ಸ್ಲಂ ಪ್ರದೇಶದಲ್ಲಿ ಹೆಚ್ಚು ಗಮನ ಹರಿಸಿ ಲಸಿಕಾಕರಣ ಮಾಡಬೇಕು. ಮೊದಲ ಹಾಗೂ ಎರಡನೇ ಸುತ್ತಿನಲ್ಲಿ ಲಸಿಕೆ ಪಡೆಯದ  5 ವರ್ಷದೊಳಗಿನ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರಿಗೆ ಮೂರನೇ ಸುತ್ತಿನಲ್ಲಿ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಲು ಕ್ರಮ ವಹಿಸಿ, ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಮಿಷನ್ ಇಂದ್ರಧನುಷ್ 5.0 ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಸೀಮಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

21 minutes ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

5 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

5 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

13 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago