ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

ಸ್ಥಳೀಯರು ಗಮನಿಸಿದ ವೇಳೆ ಹೆಬ್ಬಾವು ಬಲೆಯಲ್ಲಿ ಸಿಕ್ಕಿಹಾಕಿಕೊಂಡು ಹೊರಬರಲು ಹರಸಾಹಸ ಪಡುತ್ತಿತ್ತು. ಬಲೆಯಿಂದ ತಪ್ಪಿಸಿಕೊಳ್ಳಲು ನಡೆಸಿದ ಪ್ರಯತ್ನದ ಪರಿಣಾಮ ಅದರ ಬಾಯಿ ಭಾಗದಲ್ಲಿ ಗಾಯಗಳಾಗಿ ರಕ್ತಸ್ರಾವವಾಗಿರುವುದು ಕಂಡುಬಂದಿದೆ.

ಹೆಬ್ಬಾವನ್ನು ಕಂಡ ಗ್ರಾಮಸ್ಥರು ಆರಂಭದಲ್ಲಿ ಆತಂಕಗೊಂಡರೂ ಧೈರ್ಯದಿಂದ ಕಾರ್ಯಾಚರಣೆ ನಡೆಸಿ, ಬಲೆಯನ್ನು ಕತ್ತರಿಸಿ ಹೆಬ್ಬಾವನ್ನು ರಕ್ಷಿಸಿದ್ದಾರೆ. ಬಳಿಕ ಘಟನೆ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಹೆಬ್ಬಾವಿನ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಅಗತ್ಯ ಚಿಕಿತ್ಸೆ ಹಾಗೂ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

ಅರಣ್ಯ ಪ್ರದೇಶಗಳ ಸಮೀಪ ಹಳೆಯ ಮೀನಿನ ಬಲೆಗಳು, ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯ ವಸ್ತುಗಳನ್ನು ಎಸೆಯುವುದರಿಂದ ವನ್ಯಜೀವಿಗಳಿಗೆ ಗಂಭೀರ ಅಪಾಯ ಉಂಟಾಗುತ್ತಿದೆ. ಮೀನಿನ ಬಲೆಯಲ್ಲಿ ಸಿಲುಕಿ ಹೆಬ್ಬಾವು ಸಂಕಷ್ಟಕ್ಕೆ ಸಿಲುಕಿರುವ ಈ ಘಟನೆ ಪರಿಸರ ಸಂರಕ್ಷಣೆ ಮತ್ತು ವನ್ಯಜೀವಿ ರಕ್ಷಣೆಯ ಕುರಿತು ಹೆಚ್ಚಿನ ಜಾಗೃತಿಯ ಅಗತ್ಯವನ್ನು ಮತ್ತೊಮ್ಮೆ ನೆನಪಿಸಿದೆ.

ಸ್ಥಳೀಯರು ವನ್ಯಜೀವಿಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು ಹಾಗೂ ಇಂತಹ ತ್ಯಾಜ್ಯ ವಸ್ತುಗಳನ್ನು ಅರಣ್ಯ ಪ್ರದೇಶಗಳಲ್ಲಿ ಎಸೆಯದಂತೆ ಎಚ್ಚರಿಕೆ ವಹಿಸಬೇಕಾಗಿದೆ.

Ramesh Babu

Journalist

Recent Posts

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

6 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

1 day ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago