ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

ಸ್ಥಳೀಯರು ಗಮನಿಸಿದ ವೇಳೆ ಹೆಬ್ಬಾವು ಬಲೆಯಲ್ಲಿ ಸಿಕ್ಕಿಹಾಕಿಕೊಂಡು ಹೊರಬರಲು ಹರಸಾಹಸ ಪಡುತ್ತಿತ್ತು. ಬಲೆಯಿಂದ ತಪ್ಪಿಸಿಕೊಳ್ಳಲು ನಡೆಸಿದ ಪ್ರಯತ್ನದ ಪರಿಣಾಮ ಅದರ ಬಾಯಿ ಭಾಗದಲ್ಲಿ ಗಾಯಗಳಾಗಿ ರಕ್ತಸ್ರಾವವಾಗಿರುವುದು ಕಂಡುಬಂದಿದೆ.

ಹೆಬ್ಬಾವನ್ನು ಕಂಡ ಗ್ರಾಮಸ್ಥರು ಆರಂಭದಲ್ಲಿ ಆತಂಕಗೊಂಡರೂ ಧೈರ್ಯದಿಂದ ಕಾರ್ಯಾಚರಣೆ ನಡೆಸಿ, ಬಲೆಯನ್ನು ಕತ್ತರಿಸಿ ಹೆಬ್ಬಾವನ್ನು ರಕ್ಷಿಸಿದ್ದಾರೆ. ಬಳಿಕ ಘಟನೆ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಹೆಬ್ಬಾವಿನ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಅಗತ್ಯ ಚಿಕಿತ್ಸೆ ಹಾಗೂ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

ಅರಣ್ಯ ಪ್ರದೇಶಗಳ ಸಮೀಪ ಹಳೆಯ ಮೀನಿನ ಬಲೆಗಳು, ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯ ವಸ್ತುಗಳನ್ನು ಎಸೆಯುವುದರಿಂದ ವನ್ಯಜೀವಿಗಳಿಗೆ ಗಂಭೀರ ಅಪಾಯ ಉಂಟಾಗುತ್ತಿದೆ. ಮೀನಿನ ಬಲೆಯಲ್ಲಿ ಸಿಲುಕಿ ಹೆಬ್ಬಾವು ಸಂಕಷ್ಟಕ್ಕೆ ಸಿಲುಕಿರುವ ಈ ಘಟನೆ ಪರಿಸರ ಸಂರಕ್ಷಣೆ ಮತ್ತು ವನ್ಯಜೀವಿ ರಕ್ಷಣೆಯ ಕುರಿತು ಹೆಚ್ಚಿನ ಜಾಗೃತಿಯ ಅಗತ್ಯವನ್ನು ಮತ್ತೊಮ್ಮೆ ನೆನಪಿಸಿದೆ.

ಸ್ಥಳೀಯರು ವನ್ಯಜೀವಿಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು ಹಾಗೂ ಇಂತಹ ತ್ಯಾಜ್ಯ ವಸ್ತುಗಳನ್ನು ಅರಣ್ಯ ಪ್ರದೇಶಗಳಲ್ಲಿ ಎಸೆಯದಂತೆ ಎಚ್ಚರಿಕೆ ವಹಿಸಬೇಕಾಗಿದೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

19 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

21 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

22 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

1 day ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago