ಕೋಲಾರ: ಮೀನುಗಾರಿಕೆ ಉದ್ದೇಶಕ್ಕೆ ಈ ಹಿಂದಿನಂತೆ ಕೆರೆಗಳನ್ನು ಮೀನುಗಾರರ ಸಹಕಾರ ಸಂಘಗಳ ಸುಪರ್ದಿಗೆ ನೀಡುವಂತೆ ಮೀನುಗಾರರ ಸಹಕಾರ ಸಂಘ ನಿಯಮಿತದ ಕೋಲಾರ ತಾಲ್ಲೂಕು ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ ಮಾಡಿದರು.
ನಗರದ ರೋಟರಿ ಕ್ಲಬ್ ನಲ್ಲಿ ಭಾನುವಾರ ನಡೆದ ಮೀನುಗಾರರ ಸಹಕಾರ ಸಂಘ ನಿಯಮಿತದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೊದಲಿನಿಂದಲೂ ಕೆರೆಗಳನ್ನು ಮೀನುಗಾರಿಕೆ ಉದ್ದೇಶಕ್ಕೆ ಸಂಘಗಳಿಗೆ ನೀಡಲಾಗುತಿತ್ತು. ಸಂಘದಿಂದ ಮೀನುಗಾರಿಕೆ ಮಾಡಲಾಗುತಿತ್ತು. ಇದರಿಂದ ಬಡವರಿಗೆ ಅನುಕೂಲವಾಗಿತ್ತು. ಆದರೆ, ರಾಮನಗರದ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ರಾಜ್ಯದಲ್ಲಿ ಯಾವುದೇ ಕೆರೆಯನ್ನು ಸಂಘಕ್ಕೆ ನೀಡುತ್ತಿಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ ಹಾಗೂ ನೋವಿನ ಸಂಗತಿ. ಕೋಲಾರ ಸೇರಿದಂತೆ ರಾಜ್ಯದಾದ್ಯಂತ ಈಚೆಗೆ ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಕರೆಯಲಾಗಿದೆ. ಮೀನುಗಾರಿಕೆ ನೆಚ್ಚಿಕೊಂಡಿದ್ದ ಸಂಘಕ್ಕೆ ತೊಂದರೆ ಆಗಿದೆ. ಬಡವರು ಬೀದಿಗೆ ಬಿದ್ದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದ ನಿರ್ಧಾರದಿಂದ ಸಂಘಗಳ ಪರಿಸ್ಥಿತಿ ಹದಗೆಟ್ಟಿದೆ. ಹಲವಾರು ಬಾರಿ ಮನವಿ ಮಾಡಿದ್ದರೂ ಸರ್ಕಾರ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದರು.
ಕೆರೆಗಳನ್ನು ಹರಾಜು ಮಾಡಬಾರದೆಂದು, ಸಂಘಗಳಿಗೆ ನೀಡಬೇಕೆಂದು ನ್ಯಾಯಾಲಯ ಮೊರೆ ಹೋಗಿದ್ದು ತಡೆಯಾಜ್ಞೆ ಲಭಿಸಿದೆ. ಮುಂದೆ ಏನಾಗುತ್ತದೆಯೋ ಕಾದು ನೋಡಬೇಕು. ಎಲ್ಲವೂ ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಬಿಸಿದೆ ಎಂದರು.
ಈ ಮಧ್ಯೆ, ಟೆಂಡರ್ ನಲ್ಲಿ ಸಂಘವೂ ಕೆರೆಗಳಿಗೆ ಬಿಡ್ ಮಾಡಿದ್ದು ಎಷ್ಟು ಸಿಗಲಿದೆ ನೋಡಬೇಕು ಎಂದು ಹೇಳಿದರು.
ಇದಕ್ಕೂ ಮೊದಲು ಅಬ್ಬಣಿ ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ನಿರ್ದೇಶಕರು ಹಾಗೂ ಸದಸ್ಯರು ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದರು.
ಈಚೆಗೆ ನಿಧನರಾದ ಸದಸ್ಯರ ಸ್ಮರಣಾರ್ಥ ಮೌನಾಚರಣೆ ಮಾಡಲಾಯಿತು. 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ನಡವಳಿಕೆಗಳನ್ನು ಓದಿ ಅಂಗೀಕರಿಸಲಾಯಿತು. 2024-25ನೇ ಸಾಲಿನ ಲೆಕ್ಕ ಪರಿಶೋಧನೆ ವರದಿ ಹಾಗೂ ಹಣಕಾಸಿನ ತಖ್ತೆಗಳನ್ನು ಓದಿ ಅಂಗೀಕರಿಸುವ ಹಾಗೂ 2025-26ನೇ ಸಾಲಿಗೆ ಅಂದಾಜು ಬಜೆಟ್ ಮಂಡಿಸುವ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಸಂಘದ ನಿರ್ದೇಶಕರಾದ ಮುನಿಯಪ್ಪ, ವಿ.ಶೇಖರ್, ಶ್ರೀರಾಮ್, ಎಸ್.ಬಾಬು, ಎಂ.ವೆಂಕಟರಮಣಪ್ಪ, ಸಿ.ದೇವರಾಜ್, ಕೆ.ಯಲ್ಲಪ್ಪ, ವಿ.ಲೋಕೇಶ್, ಗಂಗಮ್ಮ, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಸದಸ್ಯರು ಇದ್ದರು.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…