Categories: ಕೋಲಾರ

ಮೀನುಗಾರಿಕೆಗೆ ಕೆರೆಗಳನ್ನು ಸಂಘಗಳ ಸುಪರ್ದಿಗೆ ನೀಡಿ- ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ

ಕೋಲಾರ: ಮೀನುಗಾರಿಕೆ ಉದ್ದೇಶಕ್ಕೆ ಈ ಹಿಂದಿನಂತೆ ಕೆರೆಗಳನ್ನು ಮೀನುಗಾರರ ಸಹಕಾರ ಸಂಘಗಳ ಸುಪರ್ದಿಗೆ ನೀಡುವಂತೆ ಮೀನುಗಾರರ ಸಹಕಾರ ಸಂಘ ನಿಯಮಿತದ ಕೋಲಾರ ತಾಲ್ಲೂಕು ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ ಮಾಡಿದರು.

ನಗರದ ರೋಟರಿ ಕ್ಲಬ್ ನಲ್ಲಿ ಭಾನುವಾರ ನಡೆದ ಮೀನುಗಾರರ ಸಹಕಾರ ಸಂಘ ನಿಯಮಿತದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೊದಲಿನಿಂದಲೂ ಕೆರೆಗಳನ್ನು ‌ಮೀನುಗಾರಿಕೆ ಉದ್ದೇಶಕ್ಕೆ ಸಂಘಗಳಿಗೆ ನೀಡಲಾಗುತಿತ್ತು‌. ಸಂಘದಿಂದ ಮೀನುಗಾರಿಕೆ ಮಾಡಲಾಗುತಿತ್ತು. ಇದರಿಂದ ಬಡವರಿಗೆ ಅನುಕೂಲವಾಗಿತ್ತು. ಆದರೆ,‌ ರಾಮನಗರದ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ರಾಜ್ಯದಲ್ಲಿ ಯಾವುದೇ ಕೆರೆಯನ್ನು ಸಂಘಕ್ಕೆ ನೀಡುತ್ತಿಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ ಹಾಗೂ ನೋವಿನ ಸಂಗತಿ. ಕೋಲಾರ ಸೇರಿದಂತೆ ರಾಜ್ಯದಾದ್ಯಂತ ಈಚೆಗೆ ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಕರೆಯಲಾಗಿದೆ. ಮೀನುಗಾರಿಕೆ ನೆಚ್ಚಿಕೊಂಡಿದ್ದ ಸಂಘಕ್ಕೆ ತೊಂದರೆ ಆಗಿದೆ. ಬಡವರು ಬೀದಿಗೆ ಬಿದ್ದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ನಿರ್ಧಾರದಿಂದ ಸಂಘಗಳ ಪರಿಸ್ಥಿತಿ ಹದಗೆಟ್ಟಿದೆ‌. ಹಲವಾರು ಬಾರಿ‌ ಮನವಿ ಮಾಡಿದ್ದರೂ ಸರ್ಕಾರ ತೀರ್ಮಾನ ಕೈಗೊಂಡಿಲ್ಲ‌ ಎಂದು ಹೇಳಿದರು.

ಕೆರೆಗಳನ್ನು ಹರಾಜು ಮಾಡಬಾರದೆಂದು, ಸಂಘಗಳಿಗೆ ನೀಡಬೇಕೆಂದು ನ್ಯಾಯಾಲಯ‌ ಮೊರೆ ಹೋಗಿದ್ದು ತಡೆಯಾಜ್ಞೆ ಲಭಿಸಿದೆ. ಮುಂದೆ ಏನಾಗುತ್ತದೆಯೋ ಕಾದು ನೋಡಬೇಕು.‌ ಎಲ್ಲವೂ ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಬಿಸಿದೆ ಎಂದರು.

ಈ ಮಧ್ಯೆ, ಟೆಂಡರ್ ನಲ್ಲಿ ಸಂಘವೂ ಕೆರೆಗಳಿಗೆ ಬಿಡ್ ‌ಮಾಡಿದ್ದು ‌ಎಷ್ಟು ಸಿಗಲಿದೆ ನೋಡಬೇಕು ಎಂದು ಹೇಳಿದರು.

ಇದಕ್ಕೂ ‌ಮೊದಲು ಅಬ್ಬಣಿ ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ನಿರ್ದೇಶಕರು ಹಾಗೂ ಸದಸ್ಯರು ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದರು.

ಈಚೆಗೆ‌ ನಿಧನರಾದ ಸದಸ್ಯರ ಸ್ಮರಣಾರ್ಥ ಮೌನಾಚರಣೆ ಮಾಡಲಾಯಿತು. 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ನಡವಳಿಕೆಗಳನ್ನು ಓದಿ ಅಂಗೀಕರಿಸಲಾಯಿತು. 2024-25ನೇ ಸಾಲಿನ ಲೆಕ್ಕ ಪರಿಶೋಧನೆ ವರದಿ ಹಾಗೂ ಹಣಕಾಸಿನ ತಖ್ತೆಗಳನ್ನು ಓದಿ ಅಂಗೀಕರಿಸುವ ಹಾಗೂ 2025-26ನೇ ಸಾಲಿಗೆ ಅಂದಾಜು ಬಜೆಟ್ ಮಂಡಿಸುವ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಸಂಘದ ನಿರ್ದೇಶಕರಾದ ಮುನಿಯಪ್ಪ, ವಿ.ಶೇಖರ್, ಶ್ರೀರಾಮ್, ಎಸ್.ಬಾಬು, ಎಂ.ವೆಂಕಟರಮಣಪ್ಪ, ಸಿ.ದೇವರಾಜ್‌, ಕೆ.ಯಲ್ಲಪ್ಪ, ವಿ.ಲೋಕೇಶ್, ಗಂಗಮ್ಮ, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಸದಸ್ಯರು ಇದ್ದರು.

Ramesh Babu

Journalist

Recent Posts

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

2 minutes ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

4 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

15 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

16 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

24 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

1 day ago