Categories: ಕೋಲಾರ

ಮೀನುಗಾರಿಕೆಗೆ ಕೆರೆಗಳನ್ನು ಸಂಘಗಳ ಸುಪರ್ದಿಗೆ ನೀಡಿ- ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ

ಕೋಲಾರ: ಮೀನುಗಾರಿಕೆ ಉದ್ದೇಶಕ್ಕೆ ಈ ಹಿಂದಿನಂತೆ ಕೆರೆಗಳನ್ನು ಮೀನುಗಾರರ ಸಹಕಾರ ಸಂಘಗಳ ಸುಪರ್ದಿಗೆ ನೀಡುವಂತೆ ಮೀನುಗಾರರ ಸಹಕಾರ ಸಂಘ ನಿಯಮಿತದ ಕೋಲಾರ ತಾಲ್ಲೂಕು ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ ಮಾಡಿದರು.

ನಗರದ ರೋಟರಿ ಕ್ಲಬ್ ನಲ್ಲಿ ಭಾನುವಾರ ನಡೆದ ಮೀನುಗಾರರ ಸಹಕಾರ ಸಂಘ ನಿಯಮಿತದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೊದಲಿನಿಂದಲೂ ಕೆರೆಗಳನ್ನು ‌ಮೀನುಗಾರಿಕೆ ಉದ್ದೇಶಕ್ಕೆ ಸಂಘಗಳಿಗೆ ನೀಡಲಾಗುತಿತ್ತು‌. ಸಂಘದಿಂದ ಮೀನುಗಾರಿಕೆ ಮಾಡಲಾಗುತಿತ್ತು. ಇದರಿಂದ ಬಡವರಿಗೆ ಅನುಕೂಲವಾಗಿತ್ತು. ಆದರೆ,‌ ರಾಮನಗರದ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ರಾಜ್ಯದಲ್ಲಿ ಯಾವುದೇ ಕೆರೆಯನ್ನು ಸಂಘಕ್ಕೆ ನೀಡುತ್ತಿಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ ಹಾಗೂ ನೋವಿನ ಸಂಗತಿ. ಕೋಲಾರ ಸೇರಿದಂತೆ ರಾಜ್ಯದಾದ್ಯಂತ ಈಚೆಗೆ ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಕರೆಯಲಾಗಿದೆ. ಮೀನುಗಾರಿಕೆ ನೆಚ್ಚಿಕೊಂಡಿದ್ದ ಸಂಘಕ್ಕೆ ತೊಂದರೆ ಆಗಿದೆ. ಬಡವರು ಬೀದಿಗೆ ಬಿದ್ದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ನಿರ್ಧಾರದಿಂದ ಸಂಘಗಳ ಪರಿಸ್ಥಿತಿ ಹದಗೆಟ್ಟಿದೆ‌. ಹಲವಾರು ಬಾರಿ‌ ಮನವಿ ಮಾಡಿದ್ದರೂ ಸರ್ಕಾರ ತೀರ್ಮಾನ ಕೈಗೊಂಡಿಲ್ಲ‌ ಎಂದು ಹೇಳಿದರು.

ಕೆರೆಗಳನ್ನು ಹರಾಜು ಮಾಡಬಾರದೆಂದು, ಸಂಘಗಳಿಗೆ ನೀಡಬೇಕೆಂದು ನ್ಯಾಯಾಲಯ‌ ಮೊರೆ ಹೋಗಿದ್ದು ತಡೆಯಾಜ್ಞೆ ಲಭಿಸಿದೆ. ಮುಂದೆ ಏನಾಗುತ್ತದೆಯೋ ಕಾದು ನೋಡಬೇಕು.‌ ಎಲ್ಲವೂ ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಬಿಸಿದೆ ಎಂದರು.

ಈ ಮಧ್ಯೆ, ಟೆಂಡರ್ ನಲ್ಲಿ ಸಂಘವೂ ಕೆರೆಗಳಿಗೆ ಬಿಡ್ ‌ಮಾಡಿದ್ದು ‌ಎಷ್ಟು ಸಿಗಲಿದೆ ನೋಡಬೇಕು ಎಂದು ಹೇಳಿದರು.

ಇದಕ್ಕೂ ‌ಮೊದಲು ಅಬ್ಬಣಿ ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ನಿರ್ದೇಶಕರು ಹಾಗೂ ಸದಸ್ಯರು ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದರು.

ಈಚೆಗೆ‌ ನಿಧನರಾದ ಸದಸ್ಯರ ಸ್ಮರಣಾರ್ಥ ಮೌನಾಚರಣೆ ಮಾಡಲಾಯಿತು. 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ನಡವಳಿಕೆಗಳನ್ನು ಓದಿ ಅಂಗೀಕರಿಸಲಾಯಿತು. 2024-25ನೇ ಸಾಲಿನ ಲೆಕ್ಕ ಪರಿಶೋಧನೆ ವರದಿ ಹಾಗೂ ಹಣಕಾಸಿನ ತಖ್ತೆಗಳನ್ನು ಓದಿ ಅಂಗೀಕರಿಸುವ ಹಾಗೂ 2025-26ನೇ ಸಾಲಿಗೆ ಅಂದಾಜು ಬಜೆಟ್ ಮಂಡಿಸುವ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಸಂಘದ ನಿರ್ದೇಶಕರಾದ ಮುನಿಯಪ್ಪ, ವಿ.ಶೇಖರ್, ಶ್ರೀರಾಮ್, ಎಸ್.ಬಾಬು, ಎಂ.ವೆಂಕಟರಮಣಪ್ಪ, ಸಿ.ದೇವರಾಜ್‌, ಕೆ.ಯಲ್ಲಪ್ಪ, ವಿ.ಲೋಕೇಶ್, ಗಂಗಮ್ಮ, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಸದಸ್ಯರು ಇದ್ದರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

8 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

8 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

11 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

19 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

21 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago