Categories: ಕೋಲಾರ

ಮೀನುಗಾರಿಕೆಗೆ ಕೆರೆಗಳನ್ನು ಸಂಘಗಳ ಸುಪರ್ದಿಗೆ ನೀಡಿ- ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ

ಕೋಲಾರ: ಮೀನುಗಾರಿಕೆ ಉದ್ದೇಶಕ್ಕೆ ಈ ಹಿಂದಿನಂತೆ ಕೆರೆಗಳನ್ನು ಮೀನುಗಾರರ ಸಹಕಾರ ಸಂಘಗಳ ಸುಪರ್ದಿಗೆ ನೀಡುವಂತೆ ಮೀನುಗಾರರ ಸಹಕಾರ ಸಂಘ ನಿಯಮಿತದ ಕೋಲಾರ ತಾಲ್ಲೂಕು ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ ಮಾಡಿದರು.

ನಗರದ ರೋಟರಿ ಕ್ಲಬ್ ನಲ್ಲಿ ಭಾನುವಾರ ನಡೆದ ಮೀನುಗಾರರ ಸಹಕಾರ ಸಂಘ ನಿಯಮಿತದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೊದಲಿನಿಂದಲೂ ಕೆರೆಗಳನ್ನು ‌ಮೀನುಗಾರಿಕೆ ಉದ್ದೇಶಕ್ಕೆ ಸಂಘಗಳಿಗೆ ನೀಡಲಾಗುತಿತ್ತು‌. ಸಂಘದಿಂದ ಮೀನುಗಾರಿಕೆ ಮಾಡಲಾಗುತಿತ್ತು. ಇದರಿಂದ ಬಡವರಿಗೆ ಅನುಕೂಲವಾಗಿತ್ತು. ಆದರೆ,‌ ರಾಮನಗರದ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ರಾಜ್ಯದಲ್ಲಿ ಯಾವುದೇ ಕೆರೆಯನ್ನು ಸಂಘಕ್ಕೆ ನೀಡುತ್ತಿಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ ಹಾಗೂ ನೋವಿನ ಸಂಗತಿ. ಕೋಲಾರ ಸೇರಿದಂತೆ ರಾಜ್ಯದಾದ್ಯಂತ ಈಚೆಗೆ ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಕರೆಯಲಾಗಿದೆ. ಮೀನುಗಾರಿಕೆ ನೆಚ್ಚಿಕೊಂಡಿದ್ದ ಸಂಘಕ್ಕೆ ತೊಂದರೆ ಆಗಿದೆ. ಬಡವರು ಬೀದಿಗೆ ಬಿದ್ದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ನಿರ್ಧಾರದಿಂದ ಸಂಘಗಳ ಪರಿಸ್ಥಿತಿ ಹದಗೆಟ್ಟಿದೆ‌. ಹಲವಾರು ಬಾರಿ‌ ಮನವಿ ಮಾಡಿದ್ದರೂ ಸರ್ಕಾರ ತೀರ್ಮಾನ ಕೈಗೊಂಡಿಲ್ಲ‌ ಎಂದು ಹೇಳಿದರು.

ಕೆರೆಗಳನ್ನು ಹರಾಜು ಮಾಡಬಾರದೆಂದು, ಸಂಘಗಳಿಗೆ ನೀಡಬೇಕೆಂದು ನ್ಯಾಯಾಲಯ‌ ಮೊರೆ ಹೋಗಿದ್ದು ತಡೆಯಾಜ್ಞೆ ಲಭಿಸಿದೆ. ಮುಂದೆ ಏನಾಗುತ್ತದೆಯೋ ಕಾದು ನೋಡಬೇಕು.‌ ಎಲ್ಲವೂ ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಬಿಸಿದೆ ಎಂದರು.

ಈ ಮಧ್ಯೆ, ಟೆಂಡರ್ ನಲ್ಲಿ ಸಂಘವೂ ಕೆರೆಗಳಿಗೆ ಬಿಡ್ ‌ಮಾಡಿದ್ದು ‌ಎಷ್ಟು ಸಿಗಲಿದೆ ನೋಡಬೇಕು ಎಂದು ಹೇಳಿದರು.

ಇದಕ್ಕೂ ‌ಮೊದಲು ಅಬ್ಬಣಿ ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ನಿರ್ದೇಶಕರು ಹಾಗೂ ಸದಸ್ಯರು ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದರು.

ಈಚೆಗೆ‌ ನಿಧನರಾದ ಸದಸ್ಯರ ಸ್ಮರಣಾರ್ಥ ಮೌನಾಚರಣೆ ಮಾಡಲಾಯಿತು. 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ನಡವಳಿಕೆಗಳನ್ನು ಓದಿ ಅಂಗೀಕರಿಸಲಾಯಿತು. 2024-25ನೇ ಸಾಲಿನ ಲೆಕ್ಕ ಪರಿಶೋಧನೆ ವರದಿ ಹಾಗೂ ಹಣಕಾಸಿನ ತಖ್ತೆಗಳನ್ನು ಓದಿ ಅಂಗೀಕರಿಸುವ ಹಾಗೂ 2025-26ನೇ ಸಾಲಿಗೆ ಅಂದಾಜು ಬಜೆಟ್ ಮಂಡಿಸುವ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಸಂಘದ ನಿರ್ದೇಶಕರಾದ ಮುನಿಯಪ್ಪ, ವಿ.ಶೇಖರ್, ಶ್ರೀರಾಮ್, ಎಸ್.ಬಾಬು, ಎಂ.ವೆಂಕಟರಮಣಪ್ಪ, ಸಿ.ದೇವರಾಜ್‌, ಕೆ.ಯಲ್ಲಪ್ಪ, ವಿ.ಲೋಕೇಶ್, ಗಂಗಮ್ಮ, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಸದಸ್ಯರು ಇದ್ದರು.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

13 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

19 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

22 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

23 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

1 day ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

1 day ago