Categories: ಕೋಲಾರ

ಮೀನುಗಾರಿಕೆಗೆ ಕೆರೆಗಳನ್ನು ಸಂಘಗಳ ಸುಪರ್ದಿಗೆ ನೀಡಿ- ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ

ಕೋಲಾರ: ಮೀನುಗಾರಿಕೆ ಉದ್ದೇಶಕ್ಕೆ ಈ ಹಿಂದಿನಂತೆ ಕೆರೆಗಳನ್ನು ಮೀನುಗಾರರ ಸಹಕಾರ ಸಂಘಗಳ ಸುಪರ್ದಿಗೆ ನೀಡುವಂತೆ ಮೀನುಗಾರರ ಸಹಕಾರ ಸಂಘ ನಿಯಮಿತದ ಕೋಲಾರ ತಾಲ್ಲೂಕು ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ ಮಾಡಿದರು.

ನಗರದ ರೋಟರಿ ಕ್ಲಬ್ ನಲ್ಲಿ ಭಾನುವಾರ ನಡೆದ ಮೀನುಗಾರರ ಸಹಕಾರ ಸಂಘ ನಿಯಮಿತದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೊದಲಿನಿಂದಲೂ ಕೆರೆಗಳನ್ನು ‌ಮೀನುಗಾರಿಕೆ ಉದ್ದೇಶಕ್ಕೆ ಸಂಘಗಳಿಗೆ ನೀಡಲಾಗುತಿತ್ತು‌. ಸಂಘದಿಂದ ಮೀನುಗಾರಿಕೆ ಮಾಡಲಾಗುತಿತ್ತು. ಇದರಿಂದ ಬಡವರಿಗೆ ಅನುಕೂಲವಾಗಿತ್ತು. ಆದರೆ,‌ ರಾಮನಗರದ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ರಾಜ್ಯದಲ್ಲಿ ಯಾವುದೇ ಕೆರೆಯನ್ನು ಸಂಘಕ್ಕೆ ನೀಡುತ್ತಿಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ ಹಾಗೂ ನೋವಿನ ಸಂಗತಿ. ಕೋಲಾರ ಸೇರಿದಂತೆ ರಾಜ್ಯದಾದ್ಯಂತ ಈಚೆಗೆ ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಕರೆಯಲಾಗಿದೆ. ಮೀನುಗಾರಿಕೆ ನೆಚ್ಚಿಕೊಂಡಿದ್ದ ಸಂಘಕ್ಕೆ ತೊಂದರೆ ಆಗಿದೆ. ಬಡವರು ಬೀದಿಗೆ ಬಿದ್ದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ನಿರ್ಧಾರದಿಂದ ಸಂಘಗಳ ಪರಿಸ್ಥಿತಿ ಹದಗೆಟ್ಟಿದೆ‌. ಹಲವಾರು ಬಾರಿ‌ ಮನವಿ ಮಾಡಿದ್ದರೂ ಸರ್ಕಾರ ತೀರ್ಮಾನ ಕೈಗೊಂಡಿಲ್ಲ‌ ಎಂದು ಹೇಳಿದರು.

ಕೆರೆಗಳನ್ನು ಹರಾಜು ಮಾಡಬಾರದೆಂದು, ಸಂಘಗಳಿಗೆ ನೀಡಬೇಕೆಂದು ನ್ಯಾಯಾಲಯ‌ ಮೊರೆ ಹೋಗಿದ್ದು ತಡೆಯಾಜ್ಞೆ ಲಭಿಸಿದೆ. ಮುಂದೆ ಏನಾಗುತ್ತದೆಯೋ ಕಾದು ನೋಡಬೇಕು.‌ ಎಲ್ಲವೂ ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಬಿಸಿದೆ ಎಂದರು.

ಈ ಮಧ್ಯೆ, ಟೆಂಡರ್ ನಲ್ಲಿ ಸಂಘವೂ ಕೆರೆಗಳಿಗೆ ಬಿಡ್ ‌ಮಾಡಿದ್ದು ‌ಎಷ್ಟು ಸಿಗಲಿದೆ ನೋಡಬೇಕು ಎಂದು ಹೇಳಿದರು.

ಇದಕ್ಕೂ ‌ಮೊದಲು ಅಬ್ಬಣಿ ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ನಿರ್ದೇಶಕರು ಹಾಗೂ ಸದಸ್ಯರು ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದರು.

ಈಚೆಗೆ‌ ನಿಧನರಾದ ಸದಸ್ಯರ ಸ್ಮರಣಾರ್ಥ ಮೌನಾಚರಣೆ ಮಾಡಲಾಯಿತು. 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ನಡವಳಿಕೆಗಳನ್ನು ಓದಿ ಅಂಗೀಕರಿಸಲಾಯಿತು. 2024-25ನೇ ಸಾಲಿನ ಲೆಕ್ಕ ಪರಿಶೋಧನೆ ವರದಿ ಹಾಗೂ ಹಣಕಾಸಿನ ತಖ್ತೆಗಳನ್ನು ಓದಿ ಅಂಗೀಕರಿಸುವ ಹಾಗೂ 2025-26ನೇ ಸಾಲಿಗೆ ಅಂದಾಜು ಬಜೆಟ್ ಮಂಡಿಸುವ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಸಂಘದ ನಿರ್ದೇಶಕರಾದ ಮುನಿಯಪ್ಪ, ವಿ.ಶೇಖರ್, ಶ್ರೀರಾಮ್, ಎಸ್.ಬಾಬು, ಎಂ.ವೆಂಕಟರಮಣಪ್ಪ, ಸಿ.ದೇವರಾಜ್‌, ಕೆ.ಯಲ್ಲಪ್ಪ, ವಿ.ಲೋಕೇಶ್, ಗಂಗಮ್ಮ, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಸದಸ್ಯರು ಇದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

4 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago