Categories: ಕೋಲಾರ

ಮೀನುಗಾರಿಕೆಗೆ ಕೆರೆಗಳನ್ನು ಸಂಘಗಳ ಸುಪರ್ದಿಗೆ ನೀಡಿ- ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ

ಕೋಲಾರ: ಮೀನುಗಾರಿಕೆ ಉದ್ದೇಶಕ್ಕೆ ಈ ಹಿಂದಿನಂತೆ ಕೆರೆಗಳನ್ನು ಮೀನುಗಾರರ ಸಹಕಾರ ಸಂಘಗಳ ಸುಪರ್ದಿಗೆ ನೀಡುವಂತೆ ಮೀನುಗಾರರ ಸಹಕಾರ ಸಂಘ ನಿಯಮಿತದ ಕೋಲಾರ ತಾಲ್ಲೂಕು ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ ಮಾಡಿದರು.

ನಗರದ ರೋಟರಿ ಕ್ಲಬ್ ನಲ್ಲಿ ಭಾನುವಾರ ನಡೆದ ಮೀನುಗಾರರ ಸಹಕಾರ ಸಂಘ ನಿಯಮಿತದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೊದಲಿನಿಂದಲೂ ಕೆರೆಗಳನ್ನು ‌ಮೀನುಗಾರಿಕೆ ಉದ್ದೇಶಕ್ಕೆ ಸಂಘಗಳಿಗೆ ನೀಡಲಾಗುತಿತ್ತು‌. ಸಂಘದಿಂದ ಮೀನುಗಾರಿಕೆ ಮಾಡಲಾಗುತಿತ್ತು. ಇದರಿಂದ ಬಡವರಿಗೆ ಅನುಕೂಲವಾಗಿತ್ತು. ಆದರೆ,‌ ರಾಮನಗರದ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ರಾಜ್ಯದಲ್ಲಿ ಯಾವುದೇ ಕೆರೆಯನ್ನು ಸಂಘಕ್ಕೆ ನೀಡುತ್ತಿಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ ಹಾಗೂ ನೋವಿನ ಸಂಗತಿ. ಕೋಲಾರ ಸೇರಿದಂತೆ ರಾಜ್ಯದಾದ್ಯಂತ ಈಚೆಗೆ ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಕರೆಯಲಾಗಿದೆ. ಮೀನುಗಾರಿಕೆ ನೆಚ್ಚಿಕೊಂಡಿದ್ದ ಸಂಘಕ್ಕೆ ತೊಂದರೆ ಆಗಿದೆ. ಬಡವರು ಬೀದಿಗೆ ಬಿದ್ದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ನಿರ್ಧಾರದಿಂದ ಸಂಘಗಳ ಪರಿಸ್ಥಿತಿ ಹದಗೆಟ್ಟಿದೆ‌. ಹಲವಾರು ಬಾರಿ‌ ಮನವಿ ಮಾಡಿದ್ದರೂ ಸರ್ಕಾರ ತೀರ್ಮಾನ ಕೈಗೊಂಡಿಲ್ಲ‌ ಎಂದು ಹೇಳಿದರು.

ಕೆರೆಗಳನ್ನು ಹರಾಜು ಮಾಡಬಾರದೆಂದು, ಸಂಘಗಳಿಗೆ ನೀಡಬೇಕೆಂದು ನ್ಯಾಯಾಲಯ‌ ಮೊರೆ ಹೋಗಿದ್ದು ತಡೆಯಾಜ್ಞೆ ಲಭಿಸಿದೆ. ಮುಂದೆ ಏನಾಗುತ್ತದೆಯೋ ಕಾದು ನೋಡಬೇಕು.‌ ಎಲ್ಲವೂ ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಬಿಸಿದೆ ಎಂದರು.

ಈ ಮಧ್ಯೆ, ಟೆಂಡರ್ ನಲ್ಲಿ ಸಂಘವೂ ಕೆರೆಗಳಿಗೆ ಬಿಡ್ ‌ಮಾಡಿದ್ದು ‌ಎಷ್ಟು ಸಿಗಲಿದೆ ನೋಡಬೇಕು ಎಂದು ಹೇಳಿದರು.

ಇದಕ್ಕೂ ‌ಮೊದಲು ಅಬ್ಬಣಿ ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ನಿರ್ದೇಶಕರು ಹಾಗೂ ಸದಸ್ಯರು ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದರು.

ಈಚೆಗೆ‌ ನಿಧನರಾದ ಸದಸ್ಯರ ಸ್ಮರಣಾರ್ಥ ಮೌನಾಚರಣೆ ಮಾಡಲಾಯಿತು. 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ನಡವಳಿಕೆಗಳನ್ನು ಓದಿ ಅಂಗೀಕರಿಸಲಾಯಿತು. 2024-25ನೇ ಸಾಲಿನ ಲೆಕ್ಕ ಪರಿಶೋಧನೆ ವರದಿ ಹಾಗೂ ಹಣಕಾಸಿನ ತಖ್ತೆಗಳನ್ನು ಓದಿ ಅಂಗೀಕರಿಸುವ ಹಾಗೂ 2025-26ನೇ ಸಾಲಿಗೆ ಅಂದಾಜು ಬಜೆಟ್ ಮಂಡಿಸುವ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಸಂಘದ ನಿರ್ದೇಶಕರಾದ ಮುನಿಯಪ್ಪ, ವಿ.ಶೇಖರ್, ಶ್ರೀರಾಮ್, ಎಸ್.ಬಾಬು, ಎಂ.ವೆಂಕಟರಮಣಪ್ಪ, ಸಿ.ದೇವರಾಜ್‌, ಕೆ.ಯಲ್ಲಪ್ಪ, ವಿ.ಲೋಕೇಶ್, ಗಂಗಮ್ಮ, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಸದಸ್ಯರು ಇದ್ದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

9 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

10 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

14 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

15 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

20 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

22 hours ago