ಕೋಲಾರ: ಮೀನುಗಾರಿಕೆ ಉದ್ದೇಶಕ್ಕೆ ಈ ಹಿಂದಿನಂತೆ ಕೆರೆಗಳನ್ನು ಮೀನುಗಾರರ ಸಹಕಾರ ಸಂಘಗಳ ಸುಪರ್ದಿಗೆ ನೀಡುವಂತೆ ಮೀನುಗಾರರ ಸಹಕಾರ ಸಂಘ ನಿಯಮಿತದ ಕೋಲಾರ ತಾಲ್ಲೂಕು ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ ಮಾಡಿದರು.
ನಗರದ ರೋಟರಿ ಕ್ಲಬ್ ನಲ್ಲಿ ಭಾನುವಾರ ನಡೆದ ಮೀನುಗಾರರ ಸಹಕಾರ ಸಂಘ ನಿಯಮಿತದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೊದಲಿನಿಂದಲೂ ಕೆರೆಗಳನ್ನು ಮೀನುಗಾರಿಕೆ ಉದ್ದೇಶಕ್ಕೆ ಸಂಘಗಳಿಗೆ ನೀಡಲಾಗುತಿತ್ತು. ಸಂಘದಿಂದ ಮೀನುಗಾರಿಕೆ ಮಾಡಲಾಗುತಿತ್ತು. ಇದರಿಂದ ಬಡವರಿಗೆ ಅನುಕೂಲವಾಗಿತ್ತು. ಆದರೆ, ರಾಮನಗರದ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ರಾಜ್ಯದಲ್ಲಿ ಯಾವುದೇ ಕೆರೆಯನ್ನು ಸಂಘಕ್ಕೆ ನೀಡುತ್ತಿಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ ಹಾಗೂ ನೋವಿನ ಸಂಗತಿ. ಕೋಲಾರ ಸೇರಿದಂತೆ ರಾಜ್ಯದಾದ್ಯಂತ ಈಚೆಗೆ ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಕರೆಯಲಾಗಿದೆ. ಮೀನುಗಾರಿಕೆ ನೆಚ್ಚಿಕೊಂಡಿದ್ದ ಸಂಘಕ್ಕೆ ತೊಂದರೆ ಆಗಿದೆ. ಬಡವರು ಬೀದಿಗೆ ಬಿದ್ದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದ ನಿರ್ಧಾರದಿಂದ ಸಂಘಗಳ ಪರಿಸ್ಥಿತಿ ಹದಗೆಟ್ಟಿದೆ. ಹಲವಾರು ಬಾರಿ ಮನವಿ ಮಾಡಿದ್ದರೂ ಸರ್ಕಾರ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದರು.
ಕೆರೆಗಳನ್ನು ಹರಾಜು ಮಾಡಬಾರದೆಂದು, ಸಂಘಗಳಿಗೆ ನೀಡಬೇಕೆಂದು ನ್ಯಾಯಾಲಯ ಮೊರೆ ಹೋಗಿದ್ದು ತಡೆಯಾಜ್ಞೆ ಲಭಿಸಿದೆ. ಮುಂದೆ ಏನಾಗುತ್ತದೆಯೋ ಕಾದು ನೋಡಬೇಕು. ಎಲ್ಲವೂ ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಬಿಸಿದೆ ಎಂದರು.
ಈ ಮಧ್ಯೆ, ಟೆಂಡರ್ ನಲ್ಲಿ ಸಂಘವೂ ಕೆರೆಗಳಿಗೆ ಬಿಡ್ ಮಾಡಿದ್ದು ಎಷ್ಟು ಸಿಗಲಿದೆ ನೋಡಬೇಕು ಎಂದು ಹೇಳಿದರು.
ಇದಕ್ಕೂ ಮೊದಲು ಅಬ್ಬಣಿ ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ನಿರ್ದೇಶಕರು ಹಾಗೂ ಸದಸ್ಯರು ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದರು.
ಈಚೆಗೆ ನಿಧನರಾದ ಸದಸ್ಯರ ಸ್ಮರಣಾರ್ಥ ಮೌನಾಚರಣೆ ಮಾಡಲಾಯಿತು. 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ನಡವಳಿಕೆಗಳನ್ನು ಓದಿ ಅಂಗೀಕರಿಸಲಾಯಿತು. 2024-25ನೇ ಸಾಲಿನ ಲೆಕ್ಕ ಪರಿಶೋಧನೆ ವರದಿ ಹಾಗೂ ಹಣಕಾಸಿನ ತಖ್ತೆಗಳನ್ನು ಓದಿ ಅಂಗೀಕರಿಸುವ ಹಾಗೂ 2025-26ನೇ ಸಾಲಿಗೆ ಅಂದಾಜು ಬಜೆಟ್ ಮಂಡಿಸುವ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಸಂಘದ ನಿರ್ದೇಶಕರಾದ ಮುನಿಯಪ್ಪ, ವಿ.ಶೇಖರ್, ಶ್ರೀರಾಮ್, ಎಸ್.ಬಾಬು, ಎಂ.ವೆಂಕಟರಮಣಪ್ಪ, ಸಿ.ದೇವರಾಜ್, ಕೆ.ಯಲ್ಲಪ್ಪ, ವಿ.ಲೋಕೇಶ್, ಗಂಗಮ್ಮ, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಸದಸ್ಯರು ಇದ್ದರು.
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…