ಕೋಲಾರ: ಮೀನುಗಾರಿಕೆ ಉದ್ದೇಶಕ್ಕೆ ಈ ಹಿಂದಿನಂತೆ ಕೆರೆಗಳನ್ನು ಮೀನುಗಾರರ ಸಹಕಾರ ಸಂಘಗಳ ಸುಪರ್ದಿಗೆ ನೀಡುವಂತೆ ಮೀನುಗಾರರ ಸಹಕಾರ ಸಂಘ ನಿಯಮಿತದ ಕೋಲಾರ ತಾಲ್ಲೂಕು ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ ಮಾಡಿದರು.
ನಗರದ ರೋಟರಿ ಕ್ಲಬ್ ನಲ್ಲಿ ಭಾನುವಾರ ನಡೆದ ಮೀನುಗಾರರ ಸಹಕಾರ ಸಂಘ ನಿಯಮಿತದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೊದಲಿನಿಂದಲೂ ಕೆರೆಗಳನ್ನು ಮೀನುಗಾರಿಕೆ ಉದ್ದೇಶಕ್ಕೆ ಸಂಘಗಳಿಗೆ ನೀಡಲಾಗುತಿತ್ತು. ಸಂಘದಿಂದ ಮೀನುಗಾರಿಕೆ ಮಾಡಲಾಗುತಿತ್ತು. ಇದರಿಂದ ಬಡವರಿಗೆ ಅನುಕೂಲವಾಗಿತ್ತು. ಆದರೆ, ರಾಮನಗರದ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ರಾಜ್ಯದಲ್ಲಿ ಯಾವುದೇ ಕೆರೆಯನ್ನು ಸಂಘಕ್ಕೆ ನೀಡುತ್ತಿಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ ಹಾಗೂ ನೋವಿನ ಸಂಗತಿ. ಕೋಲಾರ ಸೇರಿದಂತೆ ರಾಜ್ಯದಾದ್ಯಂತ ಈಚೆಗೆ ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಕರೆಯಲಾಗಿದೆ. ಮೀನುಗಾರಿಕೆ ನೆಚ್ಚಿಕೊಂಡಿದ್ದ ಸಂಘಕ್ಕೆ ತೊಂದರೆ ಆಗಿದೆ. ಬಡವರು ಬೀದಿಗೆ ಬಿದ್ದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದ ನಿರ್ಧಾರದಿಂದ ಸಂಘಗಳ ಪರಿಸ್ಥಿತಿ ಹದಗೆಟ್ಟಿದೆ. ಹಲವಾರು ಬಾರಿ ಮನವಿ ಮಾಡಿದ್ದರೂ ಸರ್ಕಾರ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದರು.
ಕೆರೆಗಳನ್ನು ಹರಾಜು ಮಾಡಬಾರದೆಂದು, ಸಂಘಗಳಿಗೆ ನೀಡಬೇಕೆಂದು ನ್ಯಾಯಾಲಯ ಮೊರೆ ಹೋಗಿದ್ದು ತಡೆಯಾಜ್ಞೆ ಲಭಿಸಿದೆ. ಮುಂದೆ ಏನಾಗುತ್ತದೆಯೋ ಕಾದು ನೋಡಬೇಕು. ಎಲ್ಲವೂ ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಬಿಸಿದೆ ಎಂದರು.
ಈ ಮಧ್ಯೆ, ಟೆಂಡರ್ ನಲ್ಲಿ ಸಂಘವೂ ಕೆರೆಗಳಿಗೆ ಬಿಡ್ ಮಾಡಿದ್ದು ಎಷ್ಟು ಸಿಗಲಿದೆ ನೋಡಬೇಕು ಎಂದು ಹೇಳಿದರು.
ಇದಕ್ಕೂ ಮೊದಲು ಅಬ್ಬಣಿ ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ನಿರ್ದೇಶಕರು ಹಾಗೂ ಸದಸ್ಯರು ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದರು.
ಈಚೆಗೆ ನಿಧನರಾದ ಸದಸ್ಯರ ಸ್ಮರಣಾರ್ಥ ಮೌನಾಚರಣೆ ಮಾಡಲಾಯಿತು. 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ನಡವಳಿಕೆಗಳನ್ನು ಓದಿ ಅಂಗೀಕರಿಸಲಾಯಿತು. 2024-25ನೇ ಸಾಲಿನ ಲೆಕ್ಕ ಪರಿಶೋಧನೆ ವರದಿ ಹಾಗೂ ಹಣಕಾಸಿನ ತಖ್ತೆಗಳನ್ನು ಓದಿ ಅಂಗೀಕರಿಸುವ ಹಾಗೂ 2025-26ನೇ ಸಾಲಿಗೆ ಅಂದಾಜು ಬಜೆಟ್ ಮಂಡಿಸುವ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಸಂಘದ ನಿರ್ದೇಶಕರಾದ ಮುನಿಯಪ್ಪ, ವಿ.ಶೇಖರ್, ಶ್ರೀರಾಮ್, ಎಸ್.ಬಾಬು, ಎಂ.ವೆಂಕಟರಮಣಪ್ಪ, ಸಿ.ದೇವರಾಜ್, ಕೆ.ಯಲ್ಲಪ್ಪ, ವಿ.ಲೋಕೇಶ್, ಗಂಗಮ್ಮ, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಸದಸ್ಯರು ಇದ್ದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…