ಮೀನುಗಾರಿಕೆ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ. ಮೀನುಗಾರಿಕಾ ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೀನುಗಾರಿಕೆ ಇಲಾಖೆ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ”ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5ಲಕ್ಷ ಹೆಕ್ಟೇರ್ ಒಳನಾಡು ಜಲಪ್ರದೇಶ ಇದೆ. ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟಾರೆ ಮೀನುಗಾರಿಕೆಯು 10 ಲಕ್ಷ ಜನರ ಜೀವನಕ್ಕೆ ಆಸರೆಯಾಗಿದೆ ಎಂದರು.
ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್ ಗೆ ಹೆಚ್ಚಿಸಲಾಗಿದೆ. ನಾಡ ದೋಣಿಗಳಿಗೆ ಕೈಗಾರಿಕಾ ಸೀಮೆಎಣ್ಣೆಯನ್ನು ಪ್ರತೀ ಲೀಟರ್ ಗೆ 35 ರೂ. ರಿಯಾಯಿತಿ ದರದಲ್ಲಿ ವಿತರಣೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಒಟ್ಟಾರೆ ಮೀನುಗಾರ ಸಮುದಾಯದ ಏಳಿಗೆಗೆ ಸರ್ಕಾರ ಪ್ರತೀ ಬಜೆಟ್ ನಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದರು.
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…