ಮೀನು ರಫ್ತಿನಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ- ಮೀನುಗಾರಿಕೆ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧ- ಸಿಎಂ ಸಿದ್ದರಾಮಯ್ಯ

ಮೀನುಗಾರಿಕೆ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ. ಮೀನುಗಾರಿಕಾ ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೀನುಗಾರಿಕೆ ಇಲಾಖೆ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ”ದ ಉದ್ಘಾಟನಾ ಸಮಾರಂಭದಲ್ಲಿ   ಅವರು ಮಾತನಾಡಿದರು.

ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5ಲಕ್ಷ ಹೆಕ್ಟೇರ್ ಒಳನಾಡು ಜಲಪ್ರದೇಶ ಇದೆ. ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟಾರೆ ಮೀನುಗಾರಿಕೆಯು 10 ಲಕ್ಷ ಜನರ ಜೀವನಕ್ಕೆ ಆಸರೆಯಾಗಿದೆ ಎಂದರು.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್ ಗೆ ಹೆಚ್ಚಿಸಲಾಗಿದೆ. ನಾಡ ದೋಣಿಗಳಿಗೆ ಕೈಗಾರಿಕಾ ಸೀಮೆಎಣ್ಣೆಯನ್ನು ಪ್ರತೀ ಲೀಟರ್ ಗೆ 35 ರೂ. ರಿಯಾಯಿತಿ ದರದಲ್ಲಿ ವಿತರಣೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಒಟ್ಟಾರೆ ಮೀನುಗಾರ ಸಮುದಾಯದ ಏಳಿಗೆಗೆ ಸರ್ಕಾರ ಪ್ರತೀ ಬಜೆಟ್ ನಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

6 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

7 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago