
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು.
ಅದೇರೀತಿ ಬೆಂಬಲ ಬೆಲೆ ಯೋಜನೆಯಡಿ ರಾಗಿ ಮಾರಲು ದೊಡ್ಡಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಯ ರೈತ ಭವನಕ್ಕೆ ಬಂದಿದ್ದ ರೈತರು ಮಳೆಯಲ್ಲಿ ನೆನೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು..

ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು. ಅಕಾಲಿಕ ಮಳೆ ಹಿನ್ನೆಲೆ ರಾಗಿ ಚೀಲಗಳ ಮೇಲೆ ಟಾರ್ಪಲ್ ಗಳ ಹೊದಿಕೆ ಮಾಡಿರುವ ರೈತರು. ಮಳೆ ಹಿನ್ನೆಲೆ ರಾಗಿ ಅನ್ ಲೋಡಿಂಗ್ ಕಾರ್ಯ ಸ್ಥಗಿತವಾಗಿತ್ತು. ಸುಮಾರು ಹದಿನೈದಕ್ಕೂ ಹೆಚ್ಚು ಟ್ರಾಕ್ಟರ್ ಗಳಲ್ಲೆ ಉಳಿದ ರಾಗಿ ಚೀಲಗಳು.