ಮುಂಗಾರು ಮಳೆ ಕೊರತೆ ಉಂಟಾದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್

2023 ರ ಮುಂಗಾರು ಮುಳೆಯು ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಕೊರತೆ ಉಂಟಾದಲ್ಲಿ, ಮಳೆ ಕೊರತೆಯಿಂದ ಆಗಬಹುದಾದ ಸಮಸ್ಯೆಗಳನ್ನು ನಿರ್ವಹಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಶಿವಶಂಕರ್. ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮುಂಗಾರು ಮಳೆ ಕೊರತೆಯಿಂದ ಉಂಟಾಗುವ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳೆಹಾನಿ ಕುರಿತ ಪ್ರಗತಿ ಪರಿಶೀಲನೆ ನಡೆಸಿ, 2023 ರ ಮುಂಗಾರು ಮಳೆ ಕಡಿಮೆ ಪ್ರಮಾಣದಲ್ಲಿ ಬೀಳುತ್ತಿದೆ. ಹೀಗಾಗಿ ಕೃಷಿ, ತೋಟಗಾರಿಕೆ ಬೆಳೆಗಳ ಸ್ಥಿತಿ ಗತಿ ಬಗ್ಗೆ ಮಾಹಿತಿ ಸಂಗ್ರಹಿಸಿ, ಕೆರೆ, ಕುಂಟೆಗಳಲ್ಲಿ ನೀರಿನ ಮಟ್ಟವನ್ನು ಪರಿಶೀಲಿಸಿ, ದನ, ಕರುಗಳಿಗೆ ಮೇವು ಹಾಗೂ ಆಹಾರ ಪೂರೈಕೆಯ ವ್ಯವಸ್ಥೆ ಬಗ್ಗೆ ಗಮನ ಹರಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ತೊಂದರೆ ಆಗದಂತೆ ನೋಡಿಕೊಂಡು ಅಗತ್ಯ ವಿರುವ ಕಡೆ ಕೊಳವೆ ಬಾವಿಗಳನ್ನು ಕೊರೆಯಿಸಿ ನೀರು ಪೂರೈಸಬೇಕು. ಕುಡಿಯುವ ನೀರು ಪೂರೈಕೆಯ ಪೈಪ್ ಲೈನ್ ಗಳು ಚರಂಡಿಗಳಲ್ಲಿ ಹಾದು ಹೋಗಿದ್ದರೆ ಅಂತಹ ಪೈಪ್ ಲೈನ್ ಗಳನ್ನು ಶೀಘ್ರವೇ ಬೇರೆ ಕಡೆ ಸ್ಥಳಾಂತರಿಸಿ ಎಂದು ಹೇಳಿದರು.

ಕಾರ್ಖಾನೆಗಳು ಅವೈಜ್ಞಾನಿಕವಾಗಿ ತ್ಯಾಜ್ಯ ಎಲ್ಲೆಂದರಲ್ಲಿ ಸುರಿಯುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ಅಂತಹ ದೂರುಗಳು ಬಂದಲ್ಲಿ ತಹಶೀಲ್ದಾರ್ ಗಳು ಶೀಘ್ರ ಕ್ರಮಕೈಗೊಳ್ಳಬೇಕೆಂದರು.

ಕಾರ್ಖಾನೆಗಳು ಪ್ರತಿ ತಿಂಗಳು ಹಾಗೂ ದ್ವೈವಾರ್ಷಿಕ ಪ್ರಾತ್ಯಕ್ಷಿಕೆ ಅಣಕು ಪ್ರದರ್ಶನವನ್ನು ನಿಗದಿಯಂತೆ ಕಡ್ಡಾಯವಾಗಿ ಏರ್ಪಡಿಸಿ ವರದಿ ನೀಡಿ ಎಂದು ಕಾರ್ಖಾನೆಗಳ ಮುಖ್ಯಸ್ಥರಿಗೆ ಸೂಚಿಸಿದರು.

ಅಕ್ರಮ ಎಲ್.ಪಿ.ಜಿ ಸಿಲಿಂಡರ್ ಸಂಗ್ರಹಣೆ, ರೀ ಫಿಲ್ಲಿಂಗ್, ಸಾಗಾಣಿಕೆ, ಅಪಾಯಕಾರಿ ರಾಸಾಯನಿಕಗಳ ಸಂಗ್ರಹಣೆ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಂಡು, ಅಂತಹ ಚಟುವಟಿಕೆಗಳು ನಡೆಯುವ ಪ್ರದೇಶಗಳ ಮೇಲೆ ದಾಳಿ ನಡೆಸಿ ಕಾನೂನು ಕ್ರಮಕೈಗೊಂಡು ಮುಚ್ಚಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು ಬಸವರಾಜು ವಿ, ಕಾರ್ಖಾನೆಗಳ ಉಪನಿರ್ದೇಶಕರಾದ ನರಸಿಂಹಮೂರ್ತಿ(ಹೊಸಕೋಟೆ), ತಿಮ್ಮರಾಜು(ನೆಲಮಂಗಲ), ಎನ್.ಡಿ.ಆರ್.ಎಫ್ ನ ಸಹಾಯಕ ಕಮಾಂಡೆಟ್ ಸಂತೀಲ್ ಕುಮಾರ್, ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಮುಖ್ಯಸ್ಥರು ಹೊನ್ನೇಗೌಡ, ಜಿಲ್ಲಾ ಉಪ ಪೋಲಿಸ್ ಅಧೀಕ್ಷಕ ರವಿ ಪಿ,ಕಾರ್ಖಾನೆಗಳ ಮುಖ್ಯಸ್ಥರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

2 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

3 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

5 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

9 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

14 hours ago