ಮುಂಗಾರು ಮಳೆ ಕೊರತೆ ಉಂಟಾದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್

2023 ರ ಮುಂಗಾರು ಮುಳೆಯು ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಕೊರತೆ ಉಂಟಾದಲ್ಲಿ, ಮಳೆ ಕೊರತೆಯಿಂದ ಆಗಬಹುದಾದ ಸಮಸ್ಯೆಗಳನ್ನು ನಿರ್ವಹಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಶಿವಶಂಕರ್. ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮುಂಗಾರು ಮಳೆ ಕೊರತೆಯಿಂದ ಉಂಟಾಗುವ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳೆಹಾನಿ ಕುರಿತ ಪ್ರಗತಿ ಪರಿಶೀಲನೆ ನಡೆಸಿ, 2023 ರ ಮುಂಗಾರು ಮಳೆ ಕಡಿಮೆ ಪ್ರಮಾಣದಲ್ಲಿ ಬೀಳುತ್ತಿದೆ. ಹೀಗಾಗಿ ಕೃಷಿ, ತೋಟಗಾರಿಕೆ ಬೆಳೆಗಳ ಸ್ಥಿತಿ ಗತಿ ಬಗ್ಗೆ ಮಾಹಿತಿ ಸಂಗ್ರಹಿಸಿ, ಕೆರೆ, ಕುಂಟೆಗಳಲ್ಲಿ ನೀರಿನ ಮಟ್ಟವನ್ನು ಪರಿಶೀಲಿಸಿ, ದನ, ಕರುಗಳಿಗೆ ಮೇವು ಹಾಗೂ ಆಹಾರ ಪೂರೈಕೆಯ ವ್ಯವಸ್ಥೆ ಬಗ್ಗೆ ಗಮನ ಹರಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ತೊಂದರೆ ಆಗದಂತೆ ನೋಡಿಕೊಂಡು ಅಗತ್ಯ ವಿರುವ ಕಡೆ ಕೊಳವೆ ಬಾವಿಗಳನ್ನು ಕೊರೆಯಿಸಿ ನೀರು ಪೂರೈಸಬೇಕು. ಕುಡಿಯುವ ನೀರು ಪೂರೈಕೆಯ ಪೈಪ್ ಲೈನ್ ಗಳು ಚರಂಡಿಗಳಲ್ಲಿ ಹಾದು ಹೋಗಿದ್ದರೆ ಅಂತಹ ಪೈಪ್ ಲೈನ್ ಗಳನ್ನು ಶೀಘ್ರವೇ ಬೇರೆ ಕಡೆ ಸ್ಥಳಾಂತರಿಸಿ ಎಂದು ಹೇಳಿದರು.

ಕಾರ್ಖಾನೆಗಳು ಅವೈಜ್ಞಾನಿಕವಾಗಿ ತ್ಯಾಜ್ಯ ಎಲ್ಲೆಂದರಲ್ಲಿ ಸುರಿಯುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ಅಂತಹ ದೂರುಗಳು ಬಂದಲ್ಲಿ ತಹಶೀಲ್ದಾರ್ ಗಳು ಶೀಘ್ರ ಕ್ರಮಕೈಗೊಳ್ಳಬೇಕೆಂದರು.

ಕಾರ್ಖಾನೆಗಳು ಪ್ರತಿ ತಿಂಗಳು ಹಾಗೂ ದ್ವೈವಾರ್ಷಿಕ ಪ್ರಾತ್ಯಕ್ಷಿಕೆ ಅಣಕು ಪ್ರದರ್ಶನವನ್ನು ನಿಗದಿಯಂತೆ ಕಡ್ಡಾಯವಾಗಿ ಏರ್ಪಡಿಸಿ ವರದಿ ನೀಡಿ ಎಂದು ಕಾರ್ಖಾನೆಗಳ ಮುಖ್ಯಸ್ಥರಿಗೆ ಸೂಚಿಸಿದರು.

ಅಕ್ರಮ ಎಲ್.ಪಿ.ಜಿ ಸಿಲಿಂಡರ್ ಸಂಗ್ರಹಣೆ, ರೀ ಫಿಲ್ಲಿಂಗ್, ಸಾಗಾಣಿಕೆ, ಅಪಾಯಕಾರಿ ರಾಸಾಯನಿಕಗಳ ಸಂಗ್ರಹಣೆ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಂಡು, ಅಂತಹ ಚಟುವಟಿಕೆಗಳು ನಡೆಯುವ ಪ್ರದೇಶಗಳ ಮೇಲೆ ದಾಳಿ ನಡೆಸಿ ಕಾನೂನು ಕ್ರಮಕೈಗೊಂಡು ಮುಚ್ಚಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು ಬಸವರಾಜು ವಿ, ಕಾರ್ಖಾನೆಗಳ ಉಪನಿರ್ದೇಶಕರಾದ ನರಸಿಂಹಮೂರ್ತಿ(ಹೊಸಕೋಟೆ), ತಿಮ್ಮರಾಜು(ನೆಲಮಂಗಲ), ಎನ್.ಡಿ.ಆರ್.ಎಫ್ ನ ಸಹಾಯಕ ಕಮಾಂಡೆಟ್ ಸಂತೀಲ್ ಕುಮಾರ್, ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಮುಖ್ಯಸ್ಥರು ಹೊನ್ನೇಗೌಡ, ಜಿಲ್ಲಾ ಉಪ ಪೋಲಿಸ್ ಅಧೀಕ್ಷಕ ರವಿ ಪಿ,ಕಾರ್ಖಾನೆಗಳ ಮುಖ್ಯಸ್ಥರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

2 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

10 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

15 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

18 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

19 hours ago

ಕೆ.ಎಚ್.ಎಂ. ಯೂತ್ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ನರಸಿಂಹ ಮೂರ್ತಿ ಹೆಚ್…

19 hours ago