2023 ರ ಮುಂಗಾರು ಮುಳೆಯು ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಕೊರತೆ ಉಂಟಾದಲ್ಲಿ, ಮಳೆ ಕೊರತೆಯಿಂದ ಆಗಬಹುದಾದ ಸಮಸ್ಯೆಗಳನ್ನು ನಿರ್ವಹಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಶಿವಶಂಕರ್. ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮುಂಗಾರು ಮಳೆ ಕೊರತೆಯಿಂದ ಉಂಟಾಗುವ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳೆಹಾನಿ ಕುರಿತ ಪ್ರಗತಿ ಪರಿಶೀಲನೆ ನಡೆಸಿ, 2023 ರ ಮುಂಗಾರು ಮಳೆ ಕಡಿಮೆ ಪ್ರಮಾಣದಲ್ಲಿ ಬೀಳುತ್ತಿದೆ. ಹೀಗಾಗಿ ಕೃಷಿ, ತೋಟಗಾರಿಕೆ ಬೆಳೆಗಳ ಸ್ಥಿತಿ ಗತಿ ಬಗ್ಗೆ ಮಾಹಿತಿ ಸಂಗ್ರಹಿಸಿ, ಕೆರೆ, ಕುಂಟೆಗಳಲ್ಲಿ ನೀರಿನ ಮಟ್ಟವನ್ನು ಪರಿಶೀಲಿಸಿ, ದನ, ಕರುಗಳಿಗೆ ಮೇವು ಹಾಗೂ ಆಹಾರ ಪೂರೈಕೆಯ ವ್ಯವಸ್ಥೆ ಬಗ್ಗೆ ಗಮನ ಹರಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ತೊಂದರೆ ಆಗದಂತೆ ನೋಡಿಕೊಂಡು ಅಗತ್ಯ ವಿರುವ ಕಡೆ ಕೊಳವೆ ಬಾವಿಗಳನ್ನು ಕೊರೆಯಿಸಿ ನೀರು ಪೂರೈಸಬೇಕು. ಕುಡಿಯುವ ನೀರು ಪೂರೈಕೆಯ ಪೈಪ್ ಲೈನ್ ಗಳು ಚರಂಡಿಗಳಲ್ಲಿ ಹಾದು ಹೋಗಿದ್ದರೆ ಅಂತಹ ಪೈಪ್ ಲೈನ್ ಗಳನ್ನು ಶೀಘ್ರವೇ ಬೇರೆ ಕಡೆ ಸ್ಥಳಾಂತರಿಸಿ ಎಂದು ಹೇಳಿದರು.
ಕಾರ್ಖಾನೆಗಳು ಅವೈಜ್ಞಾನಿಕವಾಗಿ ತ್ಯಾಜ್ಯ ಎಲ್ಲೆಂದರಲ್ಲಿ ಸುರಿಯುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ಅಂತಹ ದೂರುಗಳು ಬಂದಲ್ಲಿ ತಹಶೀಲ್ದಾರ್ ಗಳು ಶೀಘ್ರ ಕ್ರಮಕೈಗೊಳ್ಳಬೇಕೆಂದರು.
ಕಾರ್ಖಾನೆಗಳು ಪ್ರತಿ ತಿಂಗಳು ಹಾಗೂ ದ್ವೈವಾರ್ಷಿಕ ಪ್ರಾತ್ಯಕ್ಷಿಕೆ ಅಣಕು ಪ್ರದರ್ಶನವನ್ನು ನಿಗದಿಯಂತೆ ಕಡ್ಡಾಯವಾಗಿ ಏರ್ಪಡಿಸಿ ವರದಿ ನೀಡಿ ಎಂದು ಕಾರ್ಖಾನೆಗಳ ಮುಖ್ಯಸ್ಥರಿಗೆ ಸೂಚಿಸಿದರು.
ಅಕ್ರಮ ಎಲ್.ಪಿ.ಜಿ ಸಿಲಿಂಡರ್ ಸಂಗ್ರಹಣೆ, ರೀ ಫಿಲ್ಲಿಂಗ್, ಸಾಗಾಣಿಕೆ, ಅಪಾಯಕಾರಿ ರಾಸಾಯನಿಕಗಳ ಸಂಗ್ರಹಣೆ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಂಡು, ಅಂತಹ ಚಟುವಟಿಕೆಗಳು ನಡೆಯುವ ಪ್ರದೇಶಗಳ ಮೇಲೆ ದಾಳಿ ನಡೆಸಿ ಕಾನೂನು ಕ್ರಮಕೈಗೊಂಡು ಮುಚ್ಚಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು ಬಸವರಾಜು ವಿ, ಕಾರ್ಖಾನೆಗಳ ಉಪನಿರ್ದೇಶಕರಾದ ನರಸಿಂಹಮೂರ್ತಿ(ಹೊಸಕೋಟೆ), ತಿಮ್ಮರಾಜು(ನೆಲಮಂಗಲ), ಎನ್.ಡಿ.ಆರ್.ಎಫ್ ನ ಸಹಾಯಕ ಕಮಾಂಡೆಟ್ ಸಂತೀಲ್ ಕುಮಾರ್, ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಮುಖ್ಯಸ್ಥರು ಹೊನ್ನೇಗೌಡ, ಜಿಲ್ಲಾ ಉಪ ಪೋಲಿಸ್ ಅಧೀಕ್ಷಕ ರವಿ ಪಿ,ಕಾರ್ಖಾನೆಗಳ ಮುಖ್ಯಸ್ಥರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…