ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ನಗರದ  ಪ್ರವಾಸಿ ಮಂದಿರದ ಬಳಿಯ ವಿದ್ಯುತ್ ಪ್ರಸರಣ ಘಟಕದ ಬಳಿ ನಡೆದಿದೆ.

ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ವಾಹನವನ್ನು ಹಿಂದಿಕ್ಕುವ ವೇಳೆ ಅತಿವೇಗದಲ್ಲಿದ್ದ ಟೆಂಪೋ ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿದೆ.
ಫುಟ್ ಪಾತ್ ಗೆ ಗುದ್ದಿದ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರದ ತಂತಿ ಬೇಲಿಗೆ ನುಗ್ಗಿದೆ, ತಂತಿ ಬೇಲಿಗೆ ಹಾನಿಯಾಗಿದೆ, ಬೈಕ್ ಸವಾರನಿಗೆ ಗಾಯವಾಗಿದೆ. ಟ್ರಾನ್ಸ್ ಫಾರ್ಮರ್ ನಿಂದ ಬೆಂಕಿ ಹೊತ್ತಿಕೊಂಡಿದ್ದಾರೆ ಭಾರೀ ಅನಾಹುತವೇ ಸಂಭವಿಸುತ್ತಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Ramesh Babu

Journalist

Recent Posts

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

1 hour ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 days ago