ಕರ್ನಾಟಕ ಕೈಗಾರಿಕೆಯಲ್ಲಿ ಅತ್ಯಂತ ಮುಂದುವರೆದ ರಾಜ್ಯವಾಗಿದೆ. ಇಲ್ಲಿ ಸಣ್ಣ ಉದ್ಯಮಗಳಿಂದ ಹಿಡಿದು ಬೃಹತ್ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿದ್ಯುತ್ ನೀತಿ ಗ್ರಾಹಕರು ಹಾಗೂ ಕೈಗಾರಿಕೋದ್ಯಮಿಗಳಿಗೆ ಮಾರಕವಾಗಿರುವುದು ದುರ್ದೈವ ಮತ್ತು ಖಂಡನೀಯ.
ರಾಜ್ಯ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು ಮುಷ್ಕರ ನಡೆಸಿರುವುದು ರಾಜ್ಯದ ವಿದ್ಯುಶ್ಛಕ್ತಿ ಹಳಿ ತಪ್ಪಿರುವುದಕ್ಕೆ ಇದೇ ಸಾಕ್ಷಿ.
ಮುಂದಿನ ದಿನಗಳಲ್ಲಿ ಸಾಮಾನ್ಯ ಜನರಿಂದ ಹಿಡಿದು ಕೈಗಾರಿಕೆಗಳಿಗೂ ವಿದ್ಯುತ್ ಕ್ಷಾಮ ತಲೆದೋರುವ ಸಾಧ್ಯತೆ ಇದೆ. ಸರ್ಕಾರ ಕೂಡಲೆ ಎಚ್ಚೆತ್ತುಕೊಂಡು ಬೇಕಾಗಿರುವ ಹಣಕಾಸನ್ನು ಬಿಡುಗಡೆ ಮಾಡಬೇಕು ಹಾಗೂ ವಿದ್ಯುತ್ ಬಳಕೆದಾರರ ಮೇಲಿನ ಹೊರೆ ಕಡಿಮೆ ಮಾಡಬೇಕು.
ಪೂರ್ವ ತಯಾರಿ ಇಲ್ಲದೆ ಗ್ಯಾರೆಂಟಿ ಜಾರಿ ಮಾಡಿದರೆ ಅದರ ಎಲ್ಲ ಭಾರವೂ ಜನ ಸಾಮಾನ್ಯರ ಮೇಲೆ ಬೀಳುತ್ತದೆ. ಇದನ್ನು ತಪ್ಪಿಸಬೇಕು. ಈಗಿರುವ ಲೋಪವನ್ನು ಸರಿಪಡಿಸಲಿ ಎಂದು ಎಚ್ಚರಿಸುವೆ ಎಂದಿದ್ದಾರೆ.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…