ಕರ್ನಾಟಕ ಕೈಗಾರಿಕೆಯಲ್ಲಿ ಅತ್ಯಂತ ಮುಂದುವರೆದ ರಾಜ್ಯವಾಗಿದೆ. ಇಲ್ಲಿ ಸಣ್ಣ ಉದ್ಯಮಗಳಿಂದ ಹಿಡಿದು ಬೃಹತ್ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿದ್ಯುತ್ ನೀತಿ ಗ್ರಾಹಕರು ಹಾಗೂ ಕೈಗಾರಿಕೋದ್ಯಮಿಗಳಿಗೆ ಮಾರಕವಾಗಿರುವುದು ದುರ್ದೈವ ಮತ್ತು ಖಂಡನೀಯ.
ರಾಜ್ಯ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು ಮುಷ್ಕರ ನಡೆಸಿರುವುದು ರಾಜ್ಯದ ವಿದ್ಯುಶ್ಛಕ್ತಿ ಹಳಿ ತಪ್ಪಿರುವುದಕ್ಕೆ ಇದೇ ಸಾಕ್ಷಿ.
ಮುಂದಿನ ದಿನಗಳಲ್ಲಿ ಸಾಮಾನ್ಯ ಜನರಿಂದ ಹಿಡಿದು ಕೈಗಾರಿಕೆಗಳಿಗೂ ವಿದ್ಯುತ್ ಕ್ಷಾಮ ತಲೆದೋರುವ ಸಾಧ್ಯತೆ ಇದೆ. ಸರ್ಕಾರ ಕೂಡಲೆ ಎಚ್ಚೆತ್ತುಕೊಂಡು ಬೇಕಾಗಿರುವ ಹಣಕಾಸನ್ನು ಬಿಡುಗಡೆ ಮಾಡಬೇಕು ಹಾಗೂ ವಿದ್ಯುತ್ ಬಳಕೆದಾರರ ಮೇಲಿನ ಹೊರೆ ಕಡಿಮೆ ಮಾಡಬೇಕು.
ಪೂರ್ವ ತಯಾರಿ ಇಲ್ಲದೆ ಗ್ಯಾರೆಂಟಿ ಜಾರಿ ಮಾಡಿದರೆ ಅದರ ಎಲ್ಲ ಭಾರವೂ ಜನ ಸಾಮಾನ್ಯರ ಮೇಲೆ ಬೀಳುತ್ತದೆ. ಇದನ್ನು ತಪ್ಪಿಸಬೇಕು. ಈಗಿರುವ ಲೋಪವನ್ನು ಸರಿಪಡಿಸಲಿ ಎಂದು ಎಚ್ಚರಿಸುವೆ ಎಂದಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…