ಕರ್ನಾಟಕ ಕೈಗಾರಿಕೆಯಲ್ಲಿ ಅತ್ಯಂತ ಮುಂದುವರೆದ ರಾಜ್ಯವಾಗಿದೆ. ಇಲ್ಲಿ ಸಣ್ಣ ಉದ್ಯಮಗಳಿಂದ ಹಿಡಿದು ಬೃಹತ್ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿದ್ಯುತ್ ನೀತಿ ಗ್ರಾಹಕರು ಹಾಗೂ ಕೈಗಾರಿಕೋದ್ಯಮಿಗಳಿಗೆ ಮಾರಕವಾಗಿರುವುದು ದುರ್ದೈವ ಮತ್ತು ಖಂಡನೀಯ.
ರಾಜ್ಯ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು ಮುಷ್ಕರ ನಡೆಸಿರುವುದು ರಾಜ್ಯದ ವಿದ್ಯುಶ್ಛಕ್ತಿ ಹಳಿ ತಪ್ಪಿರುವುದಕ್ಕೆ ಇದೇ ಸಾಕ್ಷಿ.
ಮುಂದಿನ ದಿನಗಳಲ್ಲಿ ಸಾಮಾನ್ಯ ಜನರಿಂದ ಹಿಡಿದು ಕೈಗಾರಿಕೆಗಳಿಗೂ ವಿದ್ಯುತ್ ಕ್ಷಾಮ ತಲೆದೋರುವ ಸಾಧ್ಯತೆ ಇದೆ. ಸರ್ಕಾರ ಕೂಡಲೆ ಎಚ್ಚೆತ್ತುಕೊಂಡು ಬೇಕಾಗಿರುವ ಹಣಕಾಸನ್ನು ಬಿಡುಗಡೆ ಮಾಡಬೇಕು ಹಾಗೂ ವಿದ್ಯುತ್ ಬಳಕೆದಾರರ ಮೇಲಿನ ಹೊರೆ ಕಡಿಮೆ ಮಾಡಬೇಕು.
ಪೂರ್ವ ತಯಾರಿ ಇಲ್ಲದೆ ಗ್ಯಾರೆಂಟಿ ಜಾರಿ ಮಾಡಿದರೆ ಅದರ ಎಲ್ಲ ಭಾರವೂ ಜನ ಸಾಮಾನ್ಯರ ಮೇಲೆ ಬೀಳುತ್ತದೆ. ಇದನ್ನು ತಪ್ಪಿಸಬೇಕು. ಈಗಿರುವ ಲೋಪವನ್ನು ಸರಿಪಡಿಸಲಿ ಎಂದು ಎಚ್ಚರಿಸುವೆ ಎಂದಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…