ಪ್ರತಿ ವರ್ಷವೂ ಬಿಸಿಲಿನ ತಾಪಮಾನ ಏರಿಕೆಯಾಗುತ್ತಲೇ ಇದೆ. ಇದನ್ನು ತಗ್ಗಿಸಲು ಅರಣ್ಯ ಹಾಗೂ ಪ್ರಾಕೃತಿಕ ಸಂಪತ್ತು ಹೆಚ್ಚು ಮಾಡಲೇಬೇಕಾದ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಅರವಿಂದ ಸಾಯಿಬಣ್ಣ ಹಾಗರಗಿ ಹೇಳಿದರು.
ನಗರದ ನ್ಯಾಯಾಲಯದ ಸಮೀಪ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಹಾಗೂ ವಯೋವೃದ್ಧರ ಹಿತರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ‘ಊರಿಗೊಂದು ವನ ಊರಿಗೊಂದು ಕೆರೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು.
ಅರಣ್ಯ ಪ್ರದೇಶ ಕಡಿಮೆಯಾಗುತ್ತಿದ್ದು ಮುಂದಿನ ಪೀಳಿಗೆಯ ದೃಷ್ಟಿಯಿಂದ ವನ ಸಂಪತ್ತು ಹೆಚ್ಚಾಗಬೇಕಿದೆ. ಆದರೆ ಇದು ಅರಣ್ಯ ಇಲಾಖೆಯ ಕಾರ್ಯವಷ್ಟೇ ಅಲ್ಲದೇ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರಕೃತಿಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದರು.
ಮಕ್ಕಳ ಮೇಲೆ ದೌರ್ಜನ್ಯ ಎಸಗುವವರಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆಯಿದೆ. ಬಾಲ ಕಾರ್ಮಿಕ ಪದ್ಧತಿ ಸಹ ಮಕ್ಕಳ ಮೇಲಿನ ಶೋಷಣೆಯ ಭಾಗವೇ ಆಗಿದೆ. ಇತ್ತೀಚೆಗೆ ಬಂದ ಯುಪಿಎಸ್ಸಿ ಫಲಿತಾಂಶದಲ್ಲಿ 25 ರಲ್ಲಿ 5 ಮಂದಿ ಕೆಳಸ್ತರದಿಂದ ಬಂದವರಾಗಿದ್ದು, ಶಿಕ್ಷಣಕ್ಕೆ ಒತ್ತು ನೀಡಿದರೆ ಎಂತಹ ಸಾಧನೆಯನ್ನಾದರೂ ಮಾಡುತ್ತಾರೆ ಎನ್ನುವುದಕ್ಕೆ ನಿದರ್ಶನವಾಗಿದೆ ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ.ಆರ್.ದೀಪ ಮಾತನಾಡಿ, ಊರಿಗೊಂದು ವನ ಊರಿಗೊಂದು ಕೆರೆ ಕಾರ್ಯಕ್ರಮ ಜಿಲ್ಲೆಯಾದ್ಯಂತ 7 ಸಾವಿರ ಕಾರ್ಯಕ್ರಮ ನಡೆಯುತ್ತಿವೆ. ತಾಲ್ಲೂಕಿನಲ್ಲಿ 3 ಸಾವಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಿಡಗಳನ್ನು ನೆಡುವುದರ ಜತೆಗೆ ಪೋಷಣೆ ಮಾಡಬೇಕು. ಕೆರೆಗಳ ಮಲಿನವನ್ನು ತಡೆಯಬೇಕಿದೆ. ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಜಾರಿಗೆ ತಂದಿರುವ ಪೋಕ್ಸೊ ಕಾಯ್ದೆ ಬಗ್ಗೆ ಹೆಚ್ಚಿನ ಅರಿವು ಅಗತ್ಯವಿದೆ. 18 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನಲ್ಲಿ ಮದುವೆ ಮಾಡಿದರೆ ಪೋಷಕರಾದಿಯಾಗಿ ಮದುವೆ ಮಾಡಿಸಿದವರೂ ಶಿಕ್ಷೆಗೆ ಒಳಗಾಗುತ್ತಾರೆ. ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದರು.
ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಂ.ಸುಷ್ಮಾ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಭಾರತಿ ಶ್ಯಾಮರಾಜ್ ಇದ್ದರು.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…