ಮುಂದಿನ ಪೀಳಿಗೆಗಾಗಿ ವನ ಸಂಪತ್ತು ದುಪ್ಪಟ್ಟಾಗಬೇಕು-ಅರವಿಂದ ಸಾಯಿಬಣ್ಣ ಹಾಗರಗಿ

ಪ್ರತಿ ವರ್ಷವೂ ಬಿಸಿಲಿನ ತಾಪಮಾನ ಏರಿಕೆಯಾಗುತ್ತಲೇ ಇದೆ. ಇದನ್ನು ತಗ್ಗಿಸಲು ಅರಣ್ಯ ಹಾಗೂ ಪ್ರಾಕೃತಿಕ ಸಂಪತ್ತು ಹೆಚ್ಚು ಮಾಡಲೇಬೇಕಾದ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಅರವಿಂದ ಸಾಯಿಬಣ್ಣ ಹಾಗರಗಿ ಹೇಳಿದರು.

ನಗರದ ನ್ಯಾಯಾಲಯದ ಸಮೀಪ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಹಾಗೂ ವಯೋವೃದ್ಧರ ಹಿತರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ‘ಊರಿಗೊಂದು ವನ ಊರಿಗೊಂದು ಕೆರೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು.

ಅರಣ್ಯ ಪ್ರದೇಶ ಕಡಿಮೆಯಾಗುತ್ತಿದ್ದು ಮುಂದಿನ ಪೀಳಿಗೆಯ ದೃಷ್ಟಿಯಿಂದ ವನ ಸಂಪತ್ತು ಹೆಚ್ಚಾಗಬೇಕಿದೆ. ಆದರೆ ಇದು ಅರಣ್ಯ ಇಲಾಖೆಯ ಕಾರ್ಯವಷ್ಟೇ ಅಲ್ಲದೇ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರಕೃತಿಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದರು.

ಮಕ್ಕಳ ಮೇಲೆ ದೌರ್ಜನ್ಯ ಎಸಗುವವರಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆಯಿದೆ. ಬಾಲ ಕಾರ್ಮಿಕ ಪದ್ಧತಿ ಸಹ ಮಕ್ಕಳ ಮೇಲಿನ ಶೋಷಣೆಯ ಭಾಗವೇ ಆಗಿದೆ. ಇತ್ತೀಚೆಗೆ ಬಂದ ಯುಪಿಎಸ್‌ಸಿ ಫಲಿತಾಂಶದಲ್ಲಿ 25 ರಲ್ಲಿ 5 ಮಂದಿ ಕೆಳಸ್ತರದಿಂದ ಬಂದವರಾಗಿದ್ದು, ಶಿಕ್ಷಣಕ್ಕೆ ಒತ್ತು ನೀಡಿದರೆ ಎಂತಹ ಸಾಧನೆಯನ್ನಾದರೂ ಮಾಡುತ್ತಾರೆ ಎನ್ನುವುದಕ್ಕೆ ನಿದರ್ಶನವಾಗಿದೆ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ.ಆರ್.ದೀಪ ಮಾತನಾಡಿ, ಊರಿಗೊಂದು ವನ ಊರಿಗೊಂದು ಕೆರೆ ಕಾರ್ಯಕ್ರಮ ಜಿಲ್ಲೆಯಾದ್ಯಂತ 7 ಸಾವಿರ ಕಾರ್ಯಕ್ರಮ ನಡೆಯುತ್ತಿವೆ. ತಾಲ್ಲೂಕಿನಲ್ಲಿ 3 ಸಾವಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಿಡಗಳನ್ನು ನೆಡುವುದರ ಜತೆಗೆ ಪೋಷಣೆ ಮಾಡಬೇಕು. ಕೆರೆಗಳ ಮಲಿನವನ್ನು ತಡೆಯಬೇಕಿದೆ. ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಜಾರಿಗೆ ತಂದಿರುವ ಪೋಕ್ಸೊ ಕಾಯ್ದೆ ಬಗ್ಗೆ ಹೆಚ್ಚಿನ ಅರಿವು ಅಗತ್ಯವಿದೆ. 18 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನಲ್ಲಿ ಮದುವೆ ಮಾಡಿದರೆ ಪೋಷಕರಾದಿಯಾಗಿ ಮದುವೆ ಮಾಡಿಸಿದವರೂ ಶಿಕ್ಷೆಗೆ ಒಳಗಾಗುತ್ತಾರೆ. ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಹಾಗೂ ವಯೋವೃದ್ಧರ ಹಿತರಕ್ಷಣಾ ಸಮಿತಿ ರಾಜ್ಯ ಅಧ್ಯಕ್ಷೆ ಎಚ್.ವಿ.ಭಾಗ್ಯಲಕ್ಷ್ಮಿ ಮಾತನಾಡಿ, ತಾಲ್ಲೂಕಿನ ಹಳೇಕೋಟೆ ಸುತ್ತಮುತ್ತ ಪರವಾನಿಗಿ ಪಡೆದಿರುವುದಕ್ಕಿಂತಲು ಹೆಚ್ಚಿನ ಭಾಗದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ. ಪ್ರಾಕೃತಿಕ ಸಂಪತ್ತನ್ನು ಬರಿದು ಮಾಡುತ್ತಿರುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು.

ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಂ.ಸುಷ್ಮಾ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಭಾರತಿ ಶ್ಯಾಮರಾಜ್ ಇದ್ದರು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

11 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

11 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

14 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

16 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

18 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

23 hours ago