ಮುಂದಿನ ಪೀಳಿಗೆಗಾಗಿ ವನ ಸಂಪತ್ತು ದುಪ್ಪಟ್ಟಾಗಬೇಕು-ಅರವಿಂದ ಸಾಯಿಬಣ್ಣ ಹಾಗರಗಿ

ಪ್ರತಿ ವರ್ಷವೂ ಬಿಸಿಲಿನ ತಾಪಮಾನ ಏರಿಕೆಯಾಗುತ್ತಲೇ ಇದೆ. ಇದನ್ನು ತಗ್ಗಿಸಲು ಅರಣ್ಯ ಹಾಗೂ ಪ್ರಾಕೃತಿಕ ಸಂಪತ್ತು ಹೆಚ್ಚು ಮಾಡಲೇಬೇಕಾದ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಅರವಿಂದ ಸಾಯಿಬಣ್ಣ ಹಾಗರಗಿ ಹೇಳಿದರು.

ನಗರದ ನ್ಯಾಯಾಲಯದ ಸಮೀಪ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಹಾಗೂ ವಯೋವೃದ್ಧರ ಹಿತರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ‘ಊರಿಗೊಂದು ವನ ಊರಿಗೊಂದು ಕೆರೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು.

ಅರಣ್ಯ ಪ್ರದೇಶ ಕಡಿಮೆಯಾಗುತ್ತಿದ್ದು ಮುಂದಿನ ಪೀಳಿಗೆಯ ದೃಷ್ಟಿಯಿಂದ ವನ ಸಂಪತ್ತು ಹೆಚ್ಚಾಗಬೇಕಿದೆ. ಆದರೆ ಇದು ಅರಣ್ಯ ಇಲಾಖೆಯ ಕಾರ್ಯವಷ್ಟೇ ಅಲ್ಲದೇ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರಕೃತಿಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದರು.

ಮಕ್ಕಳ ಮೇಲೆ ದೌರ್ಜನ್ಯ ಎಸಗುವವರಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆಯಿದೆ. ಬಾಲ ಕಾರ್ಮಿಕ ಪದ್ಧತಿ ಸಹ ಮಕ್ಕಳ ಮೇಲಿನ ಶೋಷಣೆಯ ಭಾಗವೇ ಆಗಿದೆ. ಇತ್ತೀಚೆಗೆ ಬಂದ ಯುಪಿಎಸ್‌ಸಿ ಫಲಿತಾಂಶದಲ್ಲಿ 25 ರಲ್ಲಿ 5 ಮಂದಿ ಕೆಳಸ್ತರದಿಂದ ಬಂದವರಾಗಿದ್ದು, ಶಿಕ್ಷಣಕ್ಕೆ ಒತ್ತು ನೀಡಿದರೆ ಎಂತಹ ಸಾಧನೆಯನ್ನಾದರೂ ಮಾಡುತ್ತಾರೆ ಎನ್ನುವುದಕ್ಕೆ ನಿದರ್ಶನವಾಗಿದೆ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ.ಆರ್.ದೀಪ ಮಾತನಾಡಿ, ಊರಿಗೊಂದು ವನ ಊರಿಗೊಂದು ಕೆರೆ ಕಾರ್ಯಕ್ರಮ ಜಿಲ್ಲೆಯಾದ್ಯಂತ 7 ಸಾವಿರ ಕಾರ್ಯಕ್ರಮ ನಡೆಯುತ್ತಿವೆ. ತಾಲ್ಲೂಕಿನಲ್ಲಿ 3 ಸಾವಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಿಡಗಳನ್ನು ನೆಡುವುದರ ಜತೆಗೆ ಪೋಷಣೆ ಮಾಡಬೇಕು. ಕೆರೆಗಳ ಮಲಿನವನ್ನು ತಡೆಯಬೇಕಿದೆ. ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಜಾರಿಗೆ ತಂದಿರುವ ಪೋಕ್ಸೊ ಕಾಯ್ದೆ ಬಗ್ಗೆ ಹೆಚ್ಚಿನ ಅರಿವು ಅಗತ್ಯವಿದೆ. 18 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನಲ್ಲಿ ಮದುವೆ ಮಾಡಿದರೆ ಪೋಷಕರಾದಿಯಾಗಿ ಮದುವೆ ಮಾಡಿಸಿದವರೂ ಶಿಕ್ಷೆಗೆ ಒಳಗಾಗುತ್ತಾರೆ. ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಹಾಗೂ ವಯೋವೃದ್ಧರ ಹಿತರಕ್ಷಣಾ ಸಮಿತಿ ರಾಜ್ಯ ಅಧ್ಯಕ್ಷೆ ಎಚ್.ವಿ.ಭಾಗ್ಯಲಕ್ಷ್ಮಿ ಮಾತನಾಡಿ, ತಾಲ್ಲೂಕಿನ ಹಳೇಕೋಟೆ ಸುತ್ತಮುತ್ತ ಪರವಾನಿಗಿ ಪಡೆದಿರುವುದಕ್ಕಿಂತಲು ಹೆಚ್ಚಿನ ಭಾಗದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ. ಪ್ರಾಕೃತಿಕ ಸಂಪತ್ತನ್ನು ಬರಿದು ಮಾಡುತ್ತಿರುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು.

ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಂ.ಸುಷ್ಮಾ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಭಾರತಿ ಶ್ಯಾಮರಾಜ್ ಇದ್ದರು.

Ramesh Babu

Journalist

Recent Posts

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

41 minutes ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

2 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

3 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

6 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

9 hours ago

ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಕಟ್ಟುನಿಟ್ಟಿನ ಕ್ರಮ

ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…

21 hours ago