ಪ್ರತಿ ವರ್ಷವೂ ಬಿಸಿಲಿನ ತಾಪಮಾನ ಏರಿಕೆಯಾಗುತ್ತಲೇ ಇದೆ. ಇದನ್ನು ತಗ್ಗಿಸಲು ಅರಣ್ಯ ಹಾಗೂ ಪ್ರಾಕೃತಿಕ ಸಂಪತ್ತು ಹೆಚ್ಚು ಮಾಡಲೇಬೇಕಾದ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಅರವಿಂದ ಸಾಯಿಬಣ್ಣ ಹಾಗರಗಿ ಹೇಳಿದರು.
ನಗರದ ನ್ಯಾಯಾಲಯದ ಸಮೀಪ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಹಾಗೂ ವಯೋವೃದ್ಧರ ಹಿತರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ‘ಊರಿಗೊಂದು ವನ ಊರಿಗೊಂದು ಕೆರೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು.
ಅರಣ್ಯ ಪ್ರದೇಶ ಕಡಿಮೆಯಾಗುತ್ತಿದ್ದು ಮುಂದಿನ ಪೀಳಿಗೆಯ ದೃಷ್ಟಿಯಿಂದ ವನ ಸಂಪತ್ತು ಹೆಚ್ಚಾಗಬೇಕಿದೆ. ಆದರೆ ಇದು ಅರಣ್ಯ ಇಲಾಖೆಯ ಕಾರ್ಯವಷ್ಟೇ ಅಲ್ಲದೇ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರಕೃತಿಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದರು.
ಮಕ್ಕಳ ಮೇಲೆ ದೌರ್ಜನ್ಯ ಎಸಗುವವರಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆಯಿದೆ. ಬಾಲ ಕಾರ್ಮಿಕ ಪದ್ಧತಿ ಸಹ ಮಕ್ಕಳ ಮೇಲಿನ ಶೋಷಣೆಯ ಭಾಗವೇ ಆಗಿದೆ. ಇತ್ತೀಚೆಗೆ ಬಂದ ಯುಪಿಎಸ್ಸಿ ಫಲಿತಾಂಶದಲ್ಲಿ 25 ರಲ್ಲಿ 5 ಮಂದಿ ಕೆಳಸ್ತರದಿಂದ ಬಂದವರಾಗಿದ್ದು, ಶಿಕ್ಷಣಕ್ಕೆ ಒತ್ತು ನೀಡಿದರೆ ಎಂತಹ ಸಾಧನೆಯನ್ನಾದರೂ ಮಾಡುತ್ತಾರೆ ಎನ್ನುವುದಕ್ಕೆ ನಿದರ್ಶನವಾಗಿದೆ ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ.ಆರ್.ದೀಪ ಮಾತನಾಡಿ, ಊರಿಗೊಂದು ವನ ಊರಿಗೊಂದು ಕೆರೆ ಕಾರ್ಯಕ್ರಮ ಜಿಲ್ಲೆಯಾದ್ಯಂತ 7 ಸಾವಿರ ಕಾರ್ಯಕ್ರಮ ನಡೆಯುತ್ತಿವೆ. ತಾಲ್ಲೂಕಿನಲ್ಲಿ 3 ಸಾವಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಿಡಗಳನ್ನು ನೆಡುವುದರ ಜತೆಗೆ ಪೋಷಣೆ ಮಾಡಬೇಕು. ಕೆರೆಗಳ ಮಲಿನವನ್ನು ತಡೆಯಬೇಕಿದೆ. ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಜಾರಿಗೆ ತಂದಿರುವ ಪೋಕ್ಸೊ ಕಾಯ್ದೆ ಬಗ್ಗೆ ಹೆಚ್ಚಿನ ಅರಿವು ಅಗತ್ಯವಿದೆ. 18 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನಲ್ಲಿ ಮದುವೆ ಮಾಡಿದರೆ ಪೋಷಕರಾದಿಯಾಗಿ ಮದುವೆ ಮಾಡಿಸಿದವರೂ ಶಿಕ್ಷೆಗೆ ಒಳಗಾಗುತ್ತಾರೆ. ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದರು.
ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಂ.ಸುಷ್ಮಾ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಭಾರತಿ ಶ್ಯಾಮರಾಜ್ ಇದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…