ಮುಂದಿನ ಪೀಳಿಗೆಗಾಗಿ ವನ ಸಂಪತ್ತು ದುಪ್ಪಟ್ಟಾಗಬೇಕು-ಅರವಿಂದ ಸಾಯಿಬಣ್ಣ ಹಾಗರಗಿ

ಪ್ರತಿ ವರ್ಷವೂ ಬಿಸಿಲಿನ ತಾಪಮಾನ ಏರಿಕೆಯಾಗುತ್ತಲೇ ಇದೆ. ಇದನ್ನು ತಗ್ಗಿಸಲು ಅರಣ್ಯ ಹಾಗೂ ಪ್ರಾಕೃತಿಕ ಸಂಪತ್ತು ಹೆಚ್ಚು ಮಾಡಲೇಬೇಕಾದ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಅರವಿಂದ ಸಾಯಿಬಣ್ಣ ಹಾಗರಗಿ ಹೇಳಿದರು.

ನಗರದ ನ್ಯಾಯಾಲಯದ ಸಮೀಪ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಹಾಗೂ ವಯೋವೃದ್ಧರ ಹಿತರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ‘ಊರಿಗೊಂದು ವನ ಊರಿಗೊಂದು ಕೆರೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು.

ಅರಣ್ಯ ಪ್ರದೇಶ ಕಡಿಮೆಯಾಗುತ್ತಿದ್ದು ಮುಂದಿನ ಪೀಳಿಗೆಯ ದೃಷ್ಟಿಯಿಂದ ವನ ಸಂಪತ್ತು ಹೆಚ್ಚಾಗಬೇಕಿದೆ. ಆದರೆ ಇದು ಅರಣ್ಯ ಇಲಾಖೆಯ ಕಾರ್ಯವಷ್ಟೇ ಅಲ್ಲದೇ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರಕೃತಿಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದರು.

ಮಕ್ಕಳ ಮೇಲೆ ದೌರ್ಜನ್ಯ ಎಸಗುವವರಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆಯಿದೆ. ಬಾಲ ಕಾರ್ಮಿಕ ಪದ್ಧತಿ ಸಹ ಮಕ್ಕಳ ಮೇಲಿನ ಶೋಷಣೆಯ ಭಾಗವೇ ಆಗಿದೆ. ಇತ್ತೀಚೆಗೆ ಬಂದ ಯುಪಿಎಸ್‌ಸಿ ಫಲಿತಾಂಶದಲ್ಲಿ 25 ರಲ್ಲಿ 5 ಮಂದಿ ಕೆಳಸ್ತರದಿಂದ ಬಂದವರಾಗಿದ್ದು, ಶಿಕ್ಷಣಕ್ಕೆ ಒತ್ತು ನೀಡಿದರೆ ಎಂತಹ ಸಾಧನೆಯನ್ನಾದರೂ ಮಾಡುತ್ತಾರೆ ಎನ್ನುವುದಕ್ಕೆ ನಿದರ್ಶನವಾಗಿದೆ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ.ಆರ್.ದೀಪ ಮಾತನಾಡಿ, ಊರಿಗೊಂದು ವನ ಊರಿಗೊಂದು ಕೆರೆ ಕಾರ್ಯಕ್ರಮ ಜಿಲ್ಲೆಯಾದ್ಯಂತ 7 ಸಾವಿರ ಕಾರ್ಯಕ್ರಮ ನಡೆಯುತ್ತಿವೆ. ತಾಲ್ಲೂಕಿನಲ್ಲಿ 3 ಸಾವಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಿಡಗಳನ್ನು ನೆಡುವುದರ ಜತೆಗೆ ಪೋಷಣೆ ಮಾಡಬೇಕು. ಕೆರೆಗಳ ಮಲಿನವನ್ನು ತಡೆಯಬೇಕಿದೆ. ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಜಾರಿಗೆ ತಂದಿರುವ ಪೋಕ್ಸೊ ಕಾಯ್ದೆ ಬಗ್ಗೆ ಹೆಚ್ಚಿನ ಅರಿವು ಅಗತ್ಯವಿದೆ. 18 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನಲ್ಲಿ ಮದುವೆ ಮಾಡಿದರೆ ಪೋಷಕರಾದಿಯಾಗಿ ಮದುವೆ ಮಾಡಿಸಿದವರೂ ಶಿಕ್ಷೆಗೆ ಒಳಗಾಗುತ್ತಾರೆ. ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಹಾಗೂ ವಯೋವೃದ್ಧರ ಹಿತರಕ್ಷಣಾ ಸಮಿತಿ ರಾಜ್ಯ ಅಧ್ಯಕ್ಷೆ ಎಚ್.ವಿ.ಭಾಗ್ಯಲಕ್ಷ್ಮಿ ಮಾತನಾಡಿ, ತಾಲ್ಲೂಕಿನ ಹಳೇಕೋಟೆ ಸುತ್ತಮುತ್ತ ಪರವಾನಿಗಿ ಪಡೆದಿರುವುದಕ್ಕಿಂತಲು ಹೆಚ್ಚಿನ ಭಾಗದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ. ಪ್ರಾಕೃತಿಕ ಸಂಪತ್ತನ್ನು ಬರಿದು ಮಾಡುತ್ತಿರುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು.

ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಂ.ಸುಷ್ಮಾ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಭಾರತಿ ಶ್ಯಾಮರಾಜ್ ಇದ್ದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

6 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

6 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

7 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

12 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

18 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago