ಪ್ರತಿ ವರ್ಷವೂ ಬಿಸಿಲಿನ ತಾಪಮಾನ ಏರಿಕೆಯಾಗುತ್ತಲೇ ಇದೆ. ಇದನ್ನು ತಗ್ಗಿಸಲು ಅರಣ್ಯ ಹಾಗೂ ಪ್ರಾಕೃತಿಕ ಸಂಪತ್ತು ಹೆಚ್ಚು ಮಾಡಲೇಬೇಕಾದ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಅರವಿಂದ ಸಾಯಿಬಣ್ಣ ಹಾಗರಗಿ ಹೇಳಿದರು.
ನಗರದ ನ್ಯಾಯಾಲಯದ ಸಮೀಪ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಹಾಗೂ ವಯೋವೃದ್ಧರ ಹಿತರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ‘ಊರಿಗೊಂದು ವನ ಊರಿಗೊಂದು ಕೆರೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು.
ಅರಣ್ಯ ಪ್ರದೇಶ ಕಡಿಮೆಯಾಗುತ್ತಿದ್ದು ಮುಂದಿನ ಪೀಳಿಗೆಯ ದೃಷ್ಟಿಯಿಂದ ವನ ಸಂಪತ್ತು ಹೆಚ್ಚಾಗಬೇಕಿದೆ. ಆದರೆ ಇದು ಅರಣ್ಯ ಇಲಾಖೆಯ ಕಾರ್ಯವಷ್ಟೇ ಅಲ್ಲದೇ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರಕೃತಿಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದರು.
ಮಕ್ಕಳ ಮೇಲೆ ದೌರ್ಜನ್ಯ ಎಸಗುವವರಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆಯಿದೆ. ಬಾಲ ಕಾರ್ಮಿಕ ಪದ್ಧತಿ ಸಹ ಮಕ್ಕಳ ಮೇಲಿನ ಶೋಷಣೆಯ ಭಾಗವೇ ಆಗಿದೆ. ಇತ್ತೀಚೆಗೆ ಬಂದ ಯುಪಿಎಸ್ಸಿ ಫಲಿತಾಂಶದಲ್ಲಿ 25 ರಲ್ಲಿ 5 ಮಂದಿ ಕೆಳಸ್ತರದಿಂದ ಬಂದವರಾಗಿದ್ದು, ಶಿಕ್ಷಣಕ್ಕೆ ಒತ್ತು ನೀಡಿದರೆ ಎಂತಹ ಸಾಧನೆಯನ್ನಾದರೂ ಮಾಡುತ್ತಾರೆ ಎನ್ನುವುದಕ್ಕೆ ನಿದರ್ಶನವಾಗಿದೆ ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ.ಆರ್.ದೀಪ ಮಾತನಾಡಿ, ಊರಿಗೊಂದು ವನ ಊರಿಗೊಂದು ಕೆರೆ ಕಾರ್ಯಕ್ರಮ ಜಿಲ್ಲೆಯಾದ್ಯಂತ 7 ಸಾವಿರ ಕಾರ್ಯಕ್ರಮ ನಡೆಯುತ್ತಿವೆ. ತಾಲ್ಲೂಕಿನಲ್ಲಿ 3 ಸಾವಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಿಡಗಳನ್ನು ನೆಡುವುದರ ಜತೆಗೆ ಪೋಷಣೆ ಮಾಡಬೇಕು. ಕೆರೆಗಳ ಮಲಿನವನ್ನು ತಡೆಯಬೇಕಿದೆ. ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಜಾರಿಗೆ ತಂದಿರುವ ಪೋಕ್ಸೊ ಕಾಯ್ದೆ ಬಗ್ಗೆ ಹೆಚ್ಚಿನ ಅರಿವು ಅಗತ್ಯವಿದೆ. 18 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನಲ್ಲಿ ಮದುವೆ ಮಾಡಿದರೆ ಪೋಷಕರಾದಿಯಾಗಿ ಮದುವೆ ಮಾಡಿಸಿದವರೂ ಶಿಕ್ಷೆಗೆ ಒಳಗಾಗುತ್ತಾರೆ. ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದರು.
ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಂ.ಸುಷ್ಮಾ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಭಾರತಿ ಶ್ಯಾಮರಾಜ್ ಇದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…