ಮುಂದುವರಿದ ಕಲ್ಯಾಣಿ, ದೇವಾಲಯಗಳ ಸ್ವಚ್ಚತಾ ಕಾರ್ಯ: ಸಾರ್ವಜನಿಕರಿಂದ ಮೆಚ್ಚುಗೆ

ದೊಡ್ಡಬಳ್ಳಾಪುರ : ದೇವಾಲಯಗಳ ಸ್ವಚ್ಚತೆಯನ್ನು ಕಾಪಾಡುವ ಸಲುವಾಗಿ ದೊಡ್ಡಬಳ್ಳಾಪುರ ದೇವಾಲಯಗಳ ಸ್ವಚ್ಚತಾ ಸಮಿತಿಯಿಂದ ಇಂದು ತೂಬಗೆರೆ ಹೋಬಳಿಯ ಕೊಂಡಸಂದ್ರದ ಕಾಶಿವಿಶ್ವನಾಥ ದೇವಾಲಯದ ಕಲ್ಯಾಣಿ ಸ್ವಚ್ಚತೆ ಹಾಗೂ ದೇವಾಲಯದ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.

ದೊಡ್ಡಬಳ್ಳಾಪುರ ಭಾಗದ ಪತ್ರಕರ್ತರು, ಕಾಶಿವಿಶ್ವನಾಥ ದೇವಾಲಯದ ಅಭಿವೃದ್ಧಿ ಸಮಿತಿ, ಹಾಗೂ ದೊಡ್ಡಬಳ್ಳಾಪುರ ಭಾಗದ ಹಲವಾರು ಹಿಂದೂ ಕಾರ್ಯಕರ್ತರೊಡನೆ ಸೇರಿ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ದೊಡ್ಡಬಳ್ಳಾಪುರ ಸ್ವಚ್ಚತಾ ಸಮಿತಿಯ ಸ್ವಚ್ಚತಾ ಕಾರ್ಯವೈಖರಿ ಮುಂದುವರೆದಿದ್ದು, ಮುಂದಿನ ಭಾನುವಾರ ಆಯುಧ ಪೂಜಾ ವಿಶೇಷ ದೊಡ್ಡಬಳ್ಳಾಪುರ ತಾಲ್ಲೂಕಿನ ಲಿಂಗನಹಳ್ಳಿಯ ಪ್ರಸಿದ್ದ ಚೋಳರ ಕಾಲದ ಶ್ರೀ ಆಂಜನೇಯ ದೇಗುಲದಲ್ಲಿ ನಡೆಯಲಿದೆ.

ಕಾಶಿ ವಿಶ್ವನಾಥ ದೇವಾಲಯದ ಸ್ವಚ್ಚತಾ ಕಾರ್ಯ ಪಕ್ಷತೀತವಾಗಿ ಎಲ್ಲರೂ ಒಟ್ಟಾಗಿ ಕೈಜೋಡಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ.

ಈ ಸ್ವಚ್ಛತಾ ಕಾರ್ಯಕ್ರಮಕ್ಕೆ ಜೆಸಿಬಿ ವ್ಯವಸ್ಥೆಯನ್ನು ತೂಬಗೆರೆ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಲಗುಮಯ್ಯ ನೀಡಿದ್ದು, ಬೆಳಗಿನ ಉಪಹಾರ ಹಾಗೂ ಊಟದ ವ್ಯವಸ್ಥೆಯನ್ನು ತೂಬಗೆರೆ ಬಿಜೆಪಿ ಮುಖಂಡರು ಹಾಗೂ ವಕೀಲರಾದ ಪ್ರತಾಪ್ ಹಾಗೂ ಟಿ.ಎನ್. ಕೃಷ್ಣಪ್ಪ ಕಲ್ಪಿಸಿದ್ದರು. ಸ್ವಚ್ಛತಾ ಕಾರ್ಯಕ್ಕೆ ಅನುಕೂಲ ಕಲ್ಪಿಸಲು ಟ್ರಾಕ್ಟರ್ ವ್ಯವಸ್ಥೆಯನ್ನು ತೂಬಗೆರೆ ಬಿಜೆಪಿ ಮುಖಂಡ ರಾಮಕೃಷ್ಣಪ್ಪ ನೀಡಿದ್ದು, ಬ್ಯಾನರ್ ವ್ಯವಸ್ಥೆಯನ್ನು ದೊಡ್ಡಬಳ್ಳಾಪುರ ಮಧುಮಿತ ಆರ್ಟ್ಸ್ ನ ವಿಜಯಕುಮಾರ್ ಮಾಡಿಕೊಟ್ಟಿದ್ದಾರೆ ಎಲ್ಲಾ ದಾನಿಗಳಿಗೂ ನಮ್ಮ ಸ್ವಚ್ಛತಾ ಸಮಿತಿ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಸ್ವಚ್ಚತಾ ಕಾರ್ಯದ ಆಯೋಜಕರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮುಖಂಡರಾದ ಸಿ.ಎಂ.ಕೃಷ್ಣಪ್ಪ, ಮುನಿಕೃಷ್ಣಚಾರ್, ಕೇಬಲ್ ಮಂಜು, ಗೋಪಾಲ್, ಶ್ರೀನಿವಾಸ ಗುರೂಜಿ, ಘನ ಶ್ಯಾಮ್, ಕೆಂಪರಾಜು, ಮಲ್ಲೇಶ್, ಶ್ರೀನಿವಾಸ್, ಮಧು, ನರಸಿಂಹಮೂರ್ತಿ ಉದಯ ಆರಾಧ್ಯ, ಹಳ್ಳಿ ರೈತ ಅಂಬರೀಶ್, ಶಿವಕುಮಾರ್ ಸ್ವಾಮಿ, ಕಿರಣ್ ನಾರಸಿಂಹನಹಳ್ಳಿ, ಗಂಗರಾಜು, ರಾಜೇಶ್ ಸೇರಿದಂತೆ ತೂಬಗೆರೆ ಭಾಗದ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು, ಹಲವಾರು ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

3 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago