ಮುಂದುವರಿದ ಕಲ್ಯಾಣಿ, ದೇವಾಲಯಗಳ ಸ್ವಚ್ಚತಾ ಕಾರ್ಯ: ಸಾರ್ವಜನಿಕರಿಂದ ಮೆಚ್ಚುಗೆ

ದೊಡ್ಡಬಳ್ಳಾಪುರ : ದೇವಾಲಯಗಳ ಸ್ವಚ್ಚತೆಯನ್ನು ಕಾಪಾಡುವ ಸಲುವಾಗಿ ದೊಡ್ಡಬಳ್ಳಾಪುರ ದೇವಾಲಯಗಳ ಸ್ವಚ್ಚತಾ ಸಮಿತಿಯಿಂದ ಇಂದು ತೂಬಗೆರೆ ಹೋಬಳಿಯ ಕೊಂಡಸಂದ್ರದ ಕಾಶಿವಿಶ್ವನಾಥ ದೇವಾಲಯದ ಕಲ್ಯಾಣಿ ಸ್ವಚ್ಚತೆ ಹಾಗೂ ದೇವಾಲಯದ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.

ದೊಡ್ಡಬಳ್ಳಾಪುರ ಭಾಗದ ಪತ್ರಕರ್ತರು, ಕಾಶಿವಿಶ್ವನಾಥ ದೇವಾಲಯದ ಅಭಿವೃದ್ಧಿ ಸಮಿತಿ, ಹಾಗೂ ದೊಡ್ಡಬಳ್ಳಾಪುರ ಭಾಗದ ಹಲವಾರು ಹಿಂದೂ ಕಾರ್ಯಕರ್ತರೊಡನೆ ಸೇರಿ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ದೊಡ್ಡಬಳ್ಳಾಪುರ ಸ್ವಚ್ಚತಾ ಸಮಿತಿಯ ಸ್ವಚ್ಚತಾ ಕಾರ್ಯವೈಖರಿ ಮುಂದುವರೆದಿದ್ದು, ಮುಂದಿನ ಭಾನುವಾರ ಆಯುಧ ಪೂಜಾ ವಿಶೇಷ ದೊಡ್ಡಬಳ್ಳಾಪುರ ತಾಲ್ಲೂಕಿನ ಲಿಂಗನಹಳ್ಳಿಯ ಪ್ರಸಿದ್ದ ಚೋಳರ ಕಾಲದ ಶ್ರೀ ಆಂಜನೇಯ ದೇಗುಲದಲ್ಲಿ ನಡೆಯಲಿದೆ.

ಕಾಶಿ ವಿಶ್ವನಾಥ ದೇವಾಲಯದ ಸ್ವಚ್ಚತಾ ಕಾರ್ಯ ಪಕ್ಷತೀತವಾಗಿ ಎಲ್ಲರೂ ಒಟ್ಟಾಗಿ ಕೈಜೋಡಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ.

ಈ ಸ್ವಚ್ಛತಾ ಕಾರ್ಯಕ್ರಮಕ್ಕೆ ಜೆಸಿಬಿ ವ್ಯವಸ್ಥೆಯನ್ನು ತೂಬಗೆರೆ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಲಗುಮಯ್ಯ ನೀಡಿದ್ದು, ಬೆಳಗಿನ ಉಪಹಾರ ಹಾಗೂ ಊಟದ ವ್ಯವಸ್ಥೆಯನ್ನು ತೂಬಗೆರೆ ಬಿಜೆಪಿ ಮುಖಂಡರು ಹಾಗೂ ವಕೀಲರಾದ ಪ್ರತಾಪ್ ಹಾಗೂ ಟಿ.ಎನ್. ಕೃಷ್ಣಪ್ಪ ಕಲ್ಪಿಸಿದ್ದರು. ಸ್ವಚ್ಛತಾ ಕಾರ್ಯಕ್ಕೆ ಅನುಕೂಲ ಕಲ್ಪಿಸಲು ಟ್ರಾಕ್ಟರ್ ವ್ಯವಸ್ಥೆಯನ್ನು ತೂಬಗೆರೆ ಬಿಜೆಪಿ ಮುಖಂಡ ರಾಮಕೃಷ್ಣಪ್ಪ ನೀಡಿದ್ದು, ಬ್ಯಾನರ್ ವ್ಯವಸ್ಥೆಯನ್ನು ದೊಡ್ಡಬಳ್ಳಾಪುರ ಮಧುಮಿತ ಆರ್ಟ್ಸ್ ನ ವಿಜಯಕುಮಾರ್ ಮಾಡಿಕೊಟ್ಟಿದ್ದಾರೆ ಎಲ್ಲಾ ದಾನಿಗಳಿಗೂ ನಮ್ಮ ಸ್ವಚ್ಛತಾ ಸಮಿತಿ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಸ್ವಚ್ಚತಾ ಕಾರ್ಯದ ಆಯೋಜಕರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮುಖಂಡರಾದ ಸಿ.ಎಂ.ಕೃಷ್ಣಪ್ಪ, ಮುನಿಕೃಷ್ಣಚಾರ್, ಕೇಬಲ್ ಮಂಜು, ಗೋಪಾಲ್, ಶ್ರೀನಿವಾಸ ಗುರೂಜಿ, ಘನ ಶ್ಯಾಮ್, ಕೆಂಪರಾಜು, ಮಲ್ಲೇಶ್, ಶ್ರೀನಿವಾಸ್, ಮಧು, ನರಸಿಂಹಮೂರ್ತಿ ಉದಯ ಆರಾಧ್ಯ, ಹಳ್ಳಿ ರೈತ ಅಂಬರೀಶ್, ಶಿವಕುಮಾರ್ ಸ್ವಾಮಿ, ಕಿರಣ್ ನಾರಸಿಂಹನಹಳ್ಳಿ, ಗಂಗರಾಜು, ರಾಜೇಶ್ ಸೇರಿದಂತೆ ತೂಬಗೆರೆ ಭಾಗದ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು, ಹಲವಾರು ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

16 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

21 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

1 day ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

1 day ago