ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರೆದಿದ್ದು, ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸಮೀಪವಿರುವ ಪಾಲ್ ಪಾಲ್ ದಿನ್ನೆ ಗ್ರಾಮದ ಹೊರವಲಯದಲ್ಲಿರುವ ಕಾಡಿನಂಚಿನಲ್ಲಿ ನಿನ್ನೆ ಮಧ್ಯಾಹ್ನ ಮೇಕೆಯೊಂದರ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿದೆ. ಇಂದು ಮೃತ ಮೇಕೆ ಪತ್ತೆಯಾಗಿದೆ.
ರೈತ ಲಕ್ಷ್ಮಣ್ ಎಂದಿನಂತೆ ಬುಧವಾರವು(ಆ.9) ತನ್ನ ಮೇಕೆಗಳನ್ನು ಮೇಯಿಸಲು ಗ್ರಾಮದ ಹೊರವಲಯದಲ್ಲಿರುವ ಕಾಡಿಗೆ ಹೋಗಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಹೊಂಚು ಹಾಕಿ ಮೇಕೆ ಮೇಲೆ ಎರಗಿ ಬಲಿ ಪಡೆದಿರುವ ಚಿರತೆ. ನಿನ್ನೆ ಸಂಜೆ ಮನೆಗೆ ಬಂದು ನೋಡಿದಾಗ ಒಂದು ಮೇಕೆ ನಾಪತ್ತೆಯಾಗಿರುವುದು ರೈತ ಲಕ್ಷ್ಮಣ್ ಗಮನಕ್ಕೆ ಬಂದಿದೆ. ಇಂದು ಕಾಡೆಲ್ಲಾ ಹುಡುಕಾಡಿದ ಸಂದರ್ಭದಲ್ಲಿ ಕಾಡಿನ ಪಕ್ಕದಲ್ಲೇ ಇರುವ ಕೆರೆ ಬಳಿ ಮೃತ ಮೇಕೆ ಪತ್ತೆಯಾಗಿದೆ.
ಈ ಕುರಿತು ಕೂಡಲೇ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿದೆ, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಹಾವಳಿಗೆ ಬೆಚ್ಚಿಬಿದ್ದಿರುವ ಗ್ರಾಮಸ್ಥರು, ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ಸಂಬಂಧಪಟ್ಟ ಇಲಾಖೆಗೆ ಒತ್ತಾಯಿಸಿದ್ದಾರೆ.
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…
ನಟಿ ತ್ರಿಷಾ ಜತೆ ಅಫೇರ್ ಆರೋಪ, ಹೆಂಡ್ತಿ ಡಿವೋರ್ಸ್ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್ ಮೀಡಿಯಾದಲ್ಲಿ…