ಮುಂದುವರಿದ ಚಿರತೆ ಹಾವಳಿ: ನಿನ್ನೆ ಮಧ್ಯಾಹ್ನ ಚಿರತೆ ದಾಳಿಗೆ ಮೇಕೆ ಬಲಿ: ಇಂದು ಮೃತ ಮೇಕೆ ಪತ್ತೆ

ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರೆದಿದ್ದು, ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸಮೀಪವಿರುವ ಪಾಲ್ ಪಾಲ್ ದಿನ್ನೆ ಗ್ರಾಮದ ಹೊರವಲಯದಲ್ಲಿರುವ ಕಾಡಿನಂಚಿನಲ್ಲಿ ನಿನ್ನೆ ಮಧ್ಯಾಹ್ನ ಮೇಕೆಯೊಂದರ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿದೆ. ಇಂದು ಮೃತ ಮೇಕೆ ಪತ್ತೆಯಾಗಿದೆ.

ರೈತ ಲಕ್ಷ್ಮಣ್ ಎಂದಿನಂತೆ ಬುಧವಾರವು(ಆ.9) ತನ್ನ ಮೇಕೆಗಳನ್ನು ಮೇಯಿಸಲು ಗ್ರಾಮದ ಹೊರವಲಯದಲ್ಲಿರುವ ಕಾಡಿಗೆ ಹೋಗಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಹೊಂಚು ಹಾಕಿ ಮೇಕೆ ಮೇಲೆ ಎರಗಿ ಬಲಿ ಪಡೆದಿರುವ ಚಿರತೆ. ನಿನ್ನೆ ಸಂಜೆ ಮನೆಗೆ ಬಂದು ನೋಡಿದಾಗ ಒಂದು‌ ಮೇಕೆ ನಾಪತ್ತೆಯಾಗಿರುವುದು ರೈತ ಲಕ್ಷ್ಮಣ್ ಗಮನಕ್ಕೆ ಬಂದಿದೆ. ಇಂದು ಕಾಡೆಲ್ಲಾ ಹುಡುಕಾಡಿದ ಸಂದರ್ಭದಲ್ಲಿ ಕಾಡಿನ ಪಕ್ಕದಲ್ಲೇ ಇರುವ ಕೆರೆ ಬಳಿ ಮೃತ ಮೇಕೆ ಪತ್ತೆಯಾಗಿದೆ.

ಈ ಕುರಿತು ಕೂಡಲೇ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿದೆ, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಹಾವಳಿಗೆ ಬೆಚ್ಚಿಬಿದ್ದಿರುವ ಗ್ರಾಮಸ್ಥರು, ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ಸಂಬಂಧಪಟ್ಟ ಇಲಾಖೆಗೆ ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

8 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

12 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

15 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago