ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರೆದಿದ್ದು, ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸಮೀಪವಿರುವ ಪಾಲ್ ಪಾಲ್ ದಿನ್ನೆ ಗ್ರಾಮದ ಹೊರವಲಯದಲ್ಲಿರುವ ಕಾಡಿನಂಚಿನಲ್ಲಿ ನಿನ್ನೆ ಮಧ್ಯಾಹ್ನ ಮೇಕೆಯೊಂದರ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿದೆ. ಇಂದು ಮೃತ ಮೇಕೆ ಪತ್ತೆಯಾಗಿದೆ.
ರೈತ ಲಕ್ಷ್ಮಣ್ ಎಂದಿನಂತೆ ಬುಧವಾರವು(ಆ.9) ತನ್ನ ಮೇಕೆಗಳನ್ನು ಮೇಯಿಸಲು ಗ್ರಾಮದ ಹೊರವಲಯದಲ್ಲಿರುವ ಕಾಡಿಗೆ ಹೋಗಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಹೊಂಚು ಹಾಕಿ ಮೇಕೆ ಮೇಲೆ ಎರಗಿ ಬಲಿ ಪಡೆದಿರುವ ಚಿರತೆ. ನಿನ್ನೆ ಸಂಜೆ ಮನೆಗೆ ಬಂದು ನೋಡಿದಾಗ ಒಂದು ಮೇಕೆ ನಾಪತ್ತೆಯಾಗಿರುವುದು ರೈತ ಲಕ್ಷ್ಮಣ್ ಗಮನಕ್ಕೆ ಬಂದಿದೆ. ಇಂದು ಕಾಡೆಲ್ಲಾ ಹುಡುಕಾಡಿದ ಸಂದರ್ಭದಲ್ಲಿ ಕಾಡಿನ ಪಕ್ಕದಲ್ಲೇ ಇರುವ ಕೆರೆ ಬಳಿ ಮೃತ ಮೇಕೆ ಪತ್ತೆಯಾಗಿದೆ.
ಈ ಕುರಿತು ಕೂಡಲೇ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿದೆ, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಹಾವಳಿಗೆ ಬೆಚ್ಚಿಬಿದ್ದಿರುವ ಗ್ರಾಮಸ್ಥರು, ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ಸಂಬಂಧಪಟ್ಟ ಇಲಾಖೆಗೆ ಒತ್ತಾಯಿಸಿದ್ದಾರೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…