ದೊಡ್ಡಬಳ್ಳಾಪುರ : ಪಶು ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದು, ರೈತರ ಮೇಲಿನ ಶೋಷಣೆ ನಿಲ್ಲದೆ ಹೋದರೆ ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಸನ್ನ ಅವರು ಎಚ್ಚರಿಕೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಂಎಫ್ ಒಕ್ಕೂಟ ರೈತರ ಪರ ಇಲ್ಲ, ಅಧಿಕಾರಿಗಳ ಪರವಾಗಿದೆ ಎಂದು ಆರೋಪಿಸಿ, ರೈತರ ಸಂಕಷ್ಟಗಳ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿಲ್ಲ. ನಾವು ನಮಗಾಗಿ ಡೈರಿಗೆ ಹಾಲು ಹಾಕುತ್ತಿಲ್ಲ, ಅಧಿಕಾರಿಗಳ ಹೊಟ್ಟೆ ತುಂಬಿಸಲು ಹಾಲು ಹಾಕುತ್ತಿದ್ದೇವೆ ಆಕ್ರೋಶ ವ್ಯಕ್ತಪಡಿಸಿದರು.
ಒಂದು ವೇಳೆ ಕೆಎಂಎಫ್ ಮುಚ್ಚುವ ಪರಿಸ್ಥಿತಿ ಏನಾದರೂ ಬಂದರೆ ಅದು ಅಧಿಕಾರಿಗಳ ಬೇಜವಾಬ್ದಾರಿತನದಿಂದಲೇ ಹೊರೆತು ಬೇರೆ ಕಾರಣದಿಂದಲ್ಲ ಎಂದರು.
ರೈತರ ಹೆಸರೇಳಿ ಅಧಿಕಾರಕ್ಕೆ ಬಂದ ಸರಕಾರಗಳು ರೈತರ ಪರ ಇಲ್ಲ, ರಾಜ್ಯದಲ್ಲಿ ಬರಗಾಲ ಎದುರಾಗಿದೆ. ಬರಗಲಕ್ಕೆ ಅನುಗುಣವಾಗಿ ಪಶುಪಾಲನೆಗೆ ಸಿಗಬೇಕಾದ ಸೌಲಭ್ಯ ರೈತರಿಗೆ ಸಿಗುತ್ತಿಲ್ಲ ಎಂದು ಆರೋಪಿಸಿದರು.
ರೈತರ ನಿರಂತರ ಹೋರಾಟದಿಂದ ಎಚ್ಚೆತ್ತ ಕೇಂದ್ರ ಸರ್ಕಾರ ಕಳೆದ 2020-21 ನೇ ಸಾಲಿನಲ್ಲಿ ರೈತ ವಿರೋಧಿ ಕಾಯ್ದೆ ರದ್ದು ಮಾಡಿತು. ಆದರೆ, ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಂಡ ರಾಜ್ಯದ ಯಡಿಯೂರಪ್ಪ ಅವರ ಸರ್ಕಾರ ವಿವಾಧಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲಿಲ್ಲ. ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಅಧಿಕಾರಕ್ಕೆ ಬಂದ ತಕ್ಷಣ ವಿವಾಧಿತ ಕೃಷಿ ಕಾಯ್ದೆ ವಾಪಸ್ ಪಡೆಯುವ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರವೂ ಸಹ ವಾಪಸ್ ತೆಗೆದುಕೊಂಡಿಲ್ಲ. ಇದು ಎಲ್ಲಾ ಪಕ್ಷಗಳು ಪರೋಕ್ಷವಾಗಿ ಬಹುರಾಷ್ಟ್ರೀಯ ಕಂಪನಿಗಳ ಪರ ಇವೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.
ದೆಹಲಿಯಲ್ಲಿ ಎಂಎಸ್ ಪಿ ಯನ್ನ ಕಾನೂನುಬದ್ಧ ಮಾಡಬೇಕು, ಹಾಗೂ ರೈತರ 14 ಉತ್ಪನ್ನಗಳನ್ನು ಖರೀದಿ ಮಾಡಬೇಕು ಎಂದು ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ, ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ರೈತರ ಮೇಲೆ ರಬ್ಬರ್ ಗುಂಡು ಹಾರಿಸಿ ಒಬ್ಬ ಯುವಕನನ್ನು ಕೊಂದಿದೆ ಎಂದು ಆರೋಪಿಸಿದ ಅವರು, ರೈತದ ಆತ್ಮಹತ್ಯೆಗಳು ಸರ್ಕಾರಗಳೇ ಮಾಡುವ ಕೊಲೆಗೆ ಸಮಾನ. ಆದರೆ ಪ್ರತಿಭಟನೆ ಹತ್ತಿಕ್ಕಲು ಗುಂಡು ಹಾರಿಸಿ ಕೊಲ್ಲುವುದು ರೈತರನ್ನು ಬಗ್ಗುಬಡಿಯುವ ಹುನ್ನಾರ ಎಂದು ಆಕ್ರೋಶ ಹೊರ ಹಾಕಿದರು.
ರೈತ ಮುಖಂಡ ಹಾಗೂ ವಕೀಲ ಸತೀಶ್ ಮಾತನಾಡಿ, ಆದಷ್ಟು ಬೇಗ ಮೇವಿನ ಕೇಂದ್ರಗಳನ್ನ ತೆರೆಯಬೇಕು. ಸ್ವಾಮೀನಾಥನ್ ವರದಿಯನ್ನ ಜಾರಿ ಮಾಡಬೇಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಕೊಬ್ಬರಿ ಖರೀದಿ ನೋಂದಣಿ ಕೇಂದ್ರವನ್ನ ತೆರೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಮೂರ್ತಿ, ಪ್ರಧಾನ ಕಾರ್ಯದರ್ಶಿ ಸತೀಶ್ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…