ಮುಂದುವರಿದ ರೈತರ ಮೇಲಿನ ಶೋಷಣೆ : ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯುವ ಎಚ್ಚರಿಕೆ..!?

ದೊಡ್ಡಬಳ್ಳಾಪುರ : ಪಶು ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದು, ರೈತರ ಮೇಲಿನ ಶೋಷಣೆ ನಿಲ್ಲದೆ ಹೋದರೆ ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಸನ್ನ ಅವರು ಎಚ್ಚರಿಕೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಂಎಫ್ ಒಕ್ಕೂಟ ರೈತರ ಪರ ಇಲ್ಲ, ಅಧಿಕಾರಿಗಳ ಪರವಾಗಿದೆ ಎಂದು ಆರೋಪಿಸಿ, ರೈತರ ಸಂಕಷ್ಟಗಳ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿಲ್ಲ. ನಾವು ನಮಗಾಗಿ ಡೈರಿಗೆ ಹಾಲು ಹಾಕುತ್ತಿಲ್ಲ, ಅಧಿಕಾರಿಗಳ ಹೊಟ್ಟೆ ತುಂಬಿಸಲು ಹಾಲು ಹಾಕುತ್ತಿದ್ದೇವೆ ಆಕ್ರೋಶ ವ್ಯಕ್ತಪಡಿಸಿದರು.

ಒಂದು ವೇಳೆ ಕೆಎಂಎಫ್‌ ಮುಚ್ಚುವ ಪರಿಸ್ಥಿತಿ ಏನಾದರೂ ಬಂದರೆ ಅದು ಅಧಿಕಾರಿಗಳ ಬೇಜವಾಬ್ದಾರಿತನದಿಂದಲೇ ಹೊರೆತು ಬೇರೆ ಕಾರಣದಿಂದಲ್ಲ ಎಂದರು.

ರೈತರ ಹೆಸರೇಳಿ ಅಧಿಕಾರಕ್ಕೆ ಬಂದ ಸರಕಾರಗಳು ರೈತರ ಪರ ಇಲ್ಲ, ರಾಜ್ಯದಲ್ಲಿ ಬರಗಾಲ ಎದುರಾಗಿದೆ. ಬರಗಲಕ್ಕೆ ಅನುಗುಣವಾಗಿ ಪಶುಪಾಲನೆಗೆ ಸಿಗಬೇಕಾದ ಸೌಲಭ್ಯ ರೈತರಿಗೆ ಸಿಗುತ್ತಿಲ್ಲ ಎಂದು ಆರೋಪಿಸಿದರು.

ರೈತರ ನಿರಂತರ ಹೋರಾಟದಿಂದ ಎಚ್ಚೆತ್ತ ಕೇಂದ್ರ ಸರ್ಕಾರ ಕಳೆದ 2020-21 ನೇ‌ ಸಾಲಿನಲ್ಲಿ ರೈತ ವಿರೋಧಿ ಕಾಯ್ದೆ ರದ್ದು ಮಾಡಿತು. ಆದರೆ, ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಂಡ ರಾಜ್ಯದ ಯಡಿಯೂರಪ್ಪ ಅವರ ಸರ್ಕಾರ ವಿವಾಧಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲಿಲ್ಲ. ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಅಧಿಕಾರಕ್ಕೆ ಬಂದ ತಕ್ಷಣ ವಿವಾಧಿತ ಕೃಷಿ ಕಾಯ್ದೆ ವಾಪಸ್ ಪಡೆಯುವ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರವೂ ಸಹ ವಾಪಸ್ ತೆಗೆದುಕೊಂಡಿಲ್ಲ. ಇದು ಎಲ್ಲಾ ಪಕ್ಷಗಳು  ಪರೋಕ್ಷವಾಗಿ ಬಹುರಾಷ್ಟ್ರೀಯ ಕಂಪನಿಗಳ ಪರ ಇವೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ದೆಹಲಿಯಲ್ಲಿ ಎಂಎಸ್ ಪಿ ಯನ್ನ ಕಾನೂನುಬದ್ಧ ಮಾಡಬೇಕು, ಹಾಗೂ ರೈತರ 14 ಉತ್ಪನ್ನಗಳನ್ನು ಖರೀದಿ ಮಾಡಬೇಕು ಎಂದು ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ, ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ರೈತರ ಮೇಲೆ ರಬ್ಬರ್ ಗುಂಡು ಹಾರಿಸಿ ಒಬ್ಬ ಯುವಕನನ್ನು ಕೊಂದಿದೆ ಎಂದು ಆರೋಪಿಸಿದ ಅವರು, ರೈತದ ಆತ್ಮಹತ್ಯೆಗಳು ಸರ್ಕಾರಗಳೇ ಮಾಡುವ ಕೊಲೆ‌‌ಗೆ ಸಮಾನ. ಆದರೆ ಪ್ರತಿಭಟನೆ ಹತ್ತಿಕ್ಕಲು ಗುಂಡು ಹಾರಿಸಿ ಕೊಲ್ಲುವುದು ರೈತರನ್ನು ಬಗ್ಗುಬಡಿಯುವ ಹುನ್ನಾರ ಎಂದು ಆಕ್ರೋಶ ಹೊರ ಹಾಕಿದರು.

ರೈತ ಮುಖಂಡ ಹಾಗೂ ವಕೀಲ ಸತೀಶ್ ಮಾತನಾಡಿ, ಆದಷ್ಟು ಬೇಗ ಮೇವಿನ‌ ಕೇಂದ್ರಗಳನ್ನ ತೆರೆಯಬೇಕು. ಸ್ವಾಮೀನಾಥನ್ ವರದಿಯನ್ನ ಜಾರಿ ಮಾಡಬೇಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಕೊಬ್ಬರಿ ಖರೀದಿ ನೋಂದಣಿ ಕೇಂದ್ರವನ್ನ ತೆರೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಮೂರ್ತಿ, ಪ್ರಧಾನ ಕಾರ್ಯದರ್ಶಿ ಸತೀಶ್ ಸೇರಿದಂತೆ ರೈತ‌ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

2 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

13 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

14 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

14 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

15 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

22 hours ago