ಮುಂದುವರಿದ ರೈತರ ಮೇಲಿನ ಶೋಷಣೆ : ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯುವ ಎಚ್ಚರಿಕೆ..!?

ದೊಡ್ಡಬಳ್ಳಾಪುರ : ಪಶು ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದು, ರೈತರ ಮೇಲಿನ ಶೋಷಣೆ ನಿಲ್ಲದೆ ಹೋದರೆ ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಸನ್ನ ಅವರು ಎಚ್ಚರಿಕೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಂಎಫ್ ಒಕ್ಕೂಟ ರೈತರ ಪರ ಇಲ್ಲ, ಅಧಿಕಾರಿಗಳ ಪರವಾಗಿದೆ ಎಂದು ಆರೋಪಿಸಿ, ರೈತರ ಸಂಕಷ್ಟಗಳ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿಲ್ಲ. ನಾವು ನಮಗಾಗಿ ಡೈರಿಗೆ ಹಾಲು ಹಾಕುತ್ತಿಲ್ಲ, ಅಧಿಕಾರಿಗಳ ಹೊಟ್ಟೆ ತುಂಬಿಸಲು ಹಾಲು ಹಾಕುತ್ತಿದ್ದೇವೆ ಆಕ್ರೋಶ ವ್ಯಕ್ತಪಡಿಸಿದರು.

ಒಂದು ವೇಳೆ ಕೆಎಂಎಫ್‌ ಮುಚ್ಚುವ ಪರಿಸ್ಥಿತಿ ಏನಾದರೂ ಬಂದರೆ ಅದು ಅಧಿಕಾರಿಗಳ ಬೇಜವಾಬ್ದಾರಿತನದಿಂದಲೇ ಹೊರೆತು ಬೇರೆ ಕಾರಣದಿಂದಲ್ಲ ಎಂದರು.

ರೈತರ ಹೆಸರೇಳಿ ಅಧಿಕಾರಕ್ಕೆ ಬಂದ ಸರಕಾರಗಳು ರೈತರ ಪರ ಇಲ್ಲ, ರಾಜ್ಯದಲ್ಲಿ ಬರಗಾಲ ಎದುರಾಗಿದೆ. ಬರಗಲಕ್ಕೆ ಅನುಗುಣವಾಗಿ ಪಶುಪಾಲನೆಗೆ ಸಿಗಬೇಕಾದ ಸೌಲಭ್ಯ ರೈತರಿಗೆ ಸಿಗುತ್ತಿಲ್ಲ ಎಂದು ಆರೋಪಿಸಿದರು.

ರೈತರ ನಿರಂತರ ಹೋರಾಟದಿಂದ ಎಚ್ಚೆತ್ತ ಕೇಂದ್ರ ಸರ್ಕಾರ ಕಳೆದ 2020-21 ನೇ‌ ಸಾಲಿನಲ್ಲಿ ರೈತ ವಿರೋಧಿ ಕಾಯ್ದೆ ರದ್ದು ಮಾಡಿತು. ಆದರೆ, ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಂಡ ರಾಜ್ಯದ ಯಡಿಯೂರಪ್ಪ ಅವರ ಸರ್ಕಾರ ವಿವಾಧಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲಿಲ್ಲ. ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಅಧಿಕಾರಕ್ಕೆ ಬಂದ ತಕ್ಷಣ ವಿವಾಧಿತ ಕೃಷಿ ಕಾಯ್ದೆ ವಾಪಸ್ ಪಡೆಯುವ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರವೂ ಸಹ ವಾಪಸ್ ತೆಗೆದುಕೊಂಡಿಲ್ಲ. ಇದು ಎಲ್ಲಾ ಪಕ್ಷಗಳು  ಪರೋಕ್ಷವಾಗಿ ಬಹುರಾಷ್ಟ್ರೀಯ ಕಂಪನಿಗಳ ಪರ ಇವೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ದೆಹಲಿಯಲ್ಲಿ ಎಂಎಸ್ ಪಿ ಯನ್ನ ಕಾನೂನುಬದ್ಧ ಮಾಡಬೇಕು, ಹಾಗೂ ರೈತರ 14 ಉತ್ಪನ್ನಗಳನ್ನು ಖರೀದಿ ಮಾಡಬೇಕು ಎಂದು ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ, ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ರೈತರ ಮೇಲೆ ರಬ್ಬರ್ ಗುಂಡು ಹಾರಿಸಿ ಒಬ್ಬ ಯುವಕನನ್ನು ಕೊಂದಿದೆ ಎಂದು ಆರೋಪಿಸಿದ ಅವರು, ರೈತದ ಆತ್ಮಹತ್ಯೆಗಳು ಸರ್ಕಾರಗಳೇ ಮಾಡುವ ಕೊಲೆ‌‌ಗೆ ಸಮಾನ. ಆದರೆ ಪ್ರತಿಭಟನೆ ಹತ್ತಿಕ್ಕಲು ಗುಂಡು ಹಾರಿಸಿ ಕೊಲ್ಲುವುದು ರೈತರನ್ನು ಬಗ್ಗುಬಡಿಯುವ ಹುನ್ನಾರ ಎಂದು ಆಕ್ರೋಶ ಹೊರ ಹಾಕಿದರು.

ರೈತ ಮುಖಂಡ ಹಾಗೂ ವಕೀಲ ಸತೀಶ್ ಮಾತನಾಡಿ, ಆದಷ್ಟು ಬೇಗ ಮೇವಿನ‌ ಕೇಂದ್ರಗಳನ್ನ ತೆರೆಯಬೇಕು. ಸ್ವಾಮೀನಾಥನ್ ವರದಿಯನ್ನ ಜಾರಿ ಮಾಡಬೇಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಕೊಬ್ಬರಿ ಖರೀದಿ ನೋಂದಣಿ ಕೇಂದ್ರವನ್ನ ತೆರೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಮೂರ್ತಿ, ಪ್ರಧಾನ ಕಾರ್ಯದರ್ಶಿ ಸತೀಶ್ ಸೇರಿದಂತೆ ರೈತ‌ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

5 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

8 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago