ದೊಡ್ಡಬಳ್ಳಾಪುರ : ಪಶು ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದು, ರೈತರ ಮೇಲಿನ ಶೋಷಣೆ ನಿಲ್ಲದೆ ಹೋದರೆ ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಸನ್ನ ಅವರು ಎಚ್ಚರಿಕೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಂಎಫ್ ಒಕ್ಕೂಟ ರೈತರ ಪರ ಇಲ್ಲ, ಅಧಿಕಾರಿಗಳ ಪರವಾಗಿದೆ ಎಂದು ಆರೋಪಿಸಿ, ರೈತರ ಸಂಕಷ್ಟಗಳ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿಲ್ಲ. ನಾವು ನಮಗಾಗಿ ಡೈರಿಗೆ ಹಾಲು ಹಾಕುತ್ತಿಲ್ಲ, ಅಧಿಕಾರಿಗಳ ಹೊಟ್ಟೆ ತುಂಬಿಸಲು ಹಾಲು ಹಾಕುತ್ತಿದ್ದೇವೆ ಆಕ್ರೋಶ ವ್ಯಕ್ತಪಡಿಸಿದರು.
ಒಂದು ವೇಳೆ ಕೆಎಂಎಫ್ ಮುಚ್ಚುವ ಪರಿಸ್ಥಿತಿ ಏನಾದರೂ ಬಂದರೆ ಅದು ಅಧಿಕಾರಿಗಳ ಬೇಜವಾಬ್ದಾರಿತನದಿಂದಲೇ ಹೊರೆತು ಬೇರೆ ಕಾರಣದಿಂದಲ್ಲ ಎಂದರು.
ರೈತರ ಹೆಸರೇಳಿ ಅಧಿಕಾರಕ್ಕೆ ಬಂದ ಸರಕಾರಗಳು ರೈತರ ಪರ ಇಲ್ಲ, ರಾಜ್ಯದಲ್ಲಿ ಬರಗಾಲ ಎದುರಾಗಿದೆ. ಬರಗಲಕ್ಕೆ ಅನುಗುಣವಾಗಿ ಪಶುಪಾಲನೆಗೆ ಸಿಗಬೇಕಾದ ಸೌಲಭ್ಯ ರೈತರಿಗೆ ಸಿಗುತ್ತಿಲ್ಲ ಎಂದು ಆರೋಪಿಸಿದರು.
ರೈತರ ನಿರಂತರ ಹೋರಾಟದಿಂದ ಎಚ್ಚೆತ್ತ ಕೇಂದ್ರ ಸರ್ಕಾರ ಕಳೆದ 2020-21 ನೇ ಸಾಲಿನಲ್ಲಿ ರೈತ ವಿರೋಧಿ ಕಾಯ್ದೆ ರದ್ದು ಮಾಡಿತು. ಆದರೆ, ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಂಡ ರಾಜ್ಯದ ಯಡಿಯೂರಪ್ಪ ಅವರ ಸರ್ಕಾರ ವಿವಾಧಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲಿಲ್ಲ. ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಅಧಿಕಾರಕ್ಕೆ ಬಂದ ತಕ್ಷಣ ವಿವಾಧಿತ ಕೃಷಿ ಕಾಯ್ದೆ ವಾಪಸ್ ಪಡೆಯುವ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರವೂ ಸಹ ವಾಪಸ್ ತೆಗೆದುಕೊಂಡಿಲ್ಲ. ಇದು ಎಲ್ಲಾ ಪಕ್ಷಗಳು ಪರೋಕ್ಷವಾಗಿ ಬಹುರಾಷ್ಟ್ರೀಯ ಕಂಪನಿಗಳ ಪರ ಇವೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.
ದೆಹಲಿಯಲ್ಲಿ ಎಂಎಸ್ ಪಿ ಯನ್ನ ಕಾನೂನುಬದ್ಧ ಮಾಡಬೇಕು, ಹಾಗೂ ರೈತರ 14 ಉತ್ಪನ್ನಗಳನ್ನು ಖರೀದಿ ಮಾಡಬೇಕು ಎಂದು ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ, ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ರೈತರ ಮೇಲೆ ರಬ್ಬರ್ ಗುಂಡು ಹಾರಿಸಿ ಒಬ್ಬ ಯುವಕನನ್ನು ಕೊಂದಿದೆ ಎಂದು ಆರೋಪಿಸಿದ ಅವರು, ರೈತದ ಆತ್ಮಹತ್ಯೆಗಳು ಸರ್ಕಾರಗಳೇ ಮಾಡುವ ಕೊಲೆಗೆ ಸಮಾನ. ಆದರೆ ಪ್ರತಿಭಟನೆ ಹತ್ತಿಕ್ಕಲು ಗುಂಡು ಹಾರಿಸಿ ಕೊಲ್ಲುವುದು ರೈತರನ್ನು ಬಗ್ಗುಬಡಿಯುವ ಹುನ್ನಾರ ಎಂದು ಆಕ್ರೋಶ ಹೊರ ಹಾಕಿದರು.
ರೈತ ಮುಖಂಡ ಹಾಗೂ ವಕೀಲ ಸತೀಶ್ ಮಾತನಾಡಿ, ಆದಷ್ಟು ಬೇಗ ಮೇವಿನ ಕೇಂದ್ರಗಳನ್ನ ತೆರೆಯಬೇಕು. ಸ್ವಾಮೀನಾಥನ್ ವರದಿಯನ್ನ ಜಾರಿ ಮಾಡಬೇಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಕೊಬ್ಬರಿ ಖರೀದಿ ನೋಂದಣಿ ಕೇಂದ್ರವನ್ನ ತೆರೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಮೂರ್ತಿ, ಪ್ರಧಾನ ಕಾರ್ಯದರ್ಶಿ ಸತೀಶ್ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…