ಮುಂದುವರಿದ ರೈತರ ಮೇಲಿನ ಶೋಷಣೆ : ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯುವ ಎಚ್ಚರಿಕೆ..!?

ದೊಡ್ಡಬಳ್ಳಾಪುರ : ಪಶು ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದು, ರೈತರ ಮೇಲಿನ ಶೋಷಣೆ ನಿಲ್ಲದೆ ಹೋದರೆ ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಸನ್ನ ಅವರು ಎಚ್ಚರಿಕೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಂಎಫ್ ಒಕ್ಕೂಟ ರೈತರ ಪರ ಇಲ್ಲ, ಅಧಿಕಾರಿಗಳ ಪರವಾಗಿದೆ ಎಂದು ಆರೋಪಿಸಿ, ರೈತರ ಸಂಕಷ್ಟಗಳ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿಲ್ಲ. ನಾವು ನಮಗಾಗಿ ಡೈರಿಗೆ ಹಾಲು ಹಾಕುತ್ತಿಲ್ಲ, ಅಧಿಕಾರಿಗಳ ಹೊಟ್ಟೆ ತುಂಬಿಸಲು ಹಾಲು ಹಾಕುತ್ತಿದ್ದೇವೆ ಆಕ್ರೋಶ ವ್ಯಕ್ತಪಡಿಸಿದರು.

ಒಂದು ವೇಳೆ ಕೆಎಂಎಫ್‌ ಮುಚ್ಚುವ ಪರಿಸ್ಥಿತಿ ಏನಾದರೂ ಬಂದರೆ ಅದು ಅಧಿಕಾರಿಗಳ ಬೇಜವಾಬ್ದಾರಿತನದಿಂದಲೇ ಹೊರೆತು ಬೇರೆ ಕಾರಣದಿಂದಲ್ಲ ಎಂದರು.

ರೈತರ ಹೆಸರೇಳಿ ಅಧಿಕಾರಕ್ಕೆ ಬಂದ ಸರಕಾರಗಳು ರೈತರ ಪರ ಇಲ್ಲ, ರಾಜ್ಯದಲ್ಲಿ ಬರಗಾಲ ಎದುರಾಗಿದೆ. ಬರಗಲಕ್ಕೆ ಅನುಗುಣವಾಗಿ ಪಶುಪಾಲನೆಗೆ ಸಿಗಬೇಕಾದ ಸೌಲಭ್ಯ ರೈತರಿಗೆ ಸಿಗುತ್ತಿಲ್ಲ ಎಂದು ಆರೋಪಿಸಿದರು.

ರೈತರ ನಿರಂತರ ಹೋರಾಟದಿಂದ ಎಚ್ಚೆತ್ತ ಕೇಂದ್ರ ಸರ್ಕಾರ ಕಳೆದ 2020-21 ನೇ‌ ಸಾಲಿನಲ್ಲಿ ರೈತ ವಿರೋಧಿ ಕಾಯ್ದೆ ರದ್ದು ಮಾಡಿತು. ಆದರೆ, ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಂಡ ರಾಜ್ಯದ ಯಡಿಯೂರಪ್ಪ ಅವರ ಸರ್ಕಾರ ವಿವಾಧಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲಿಲ್ಲ. ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಅಧಿಕಾರಕ್ಕೆ ಬಂದ ತಕ್ಷಣ ವಿವಾಧಿತ ಕೃಷಿ ಕಾಯ್ದೆ ವಾಪಸ್ ಪಡೆಯುವ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರವೂ ಸಹ ವಾಪಸ್ ತೆಗೆದುಕೊಂಡಿಲ್ಲ. ಇದು ಎಲ್ಲಾ ಪಕ್ಷಗಳು  ಪರೋಕ್ಷವಾಗಿ ಬಹುರಾಷ್ಟ್ರೀಯ ಕಂಪನಿಗಳ ಪರ ಇವೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ದೆಹಲಿಯಲ್ಲಿ ಎಂಎಸ್ ಪಿ ಯನ್ನ ಕಾನೂನುಬದ್ಧ ಮಾಡಬೇಕು, ಹಾಗೂ ರೈತರ 14 ಉತ್ಪನ್ನಗಳನ್ನು ಖರೀದಿ ಮಾಡಬೇಕು ಎಂದು ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ, ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ರೈತರ ಮೇಲೆ ರಬ್ಬರ್ ಗುಂಡು ಹಾರಿಸಿ ಒಬ್ಬ ಯುವಕನನ್ನು ಕೊಂದಿದೆ ಎಂದು ಆರೋಪಿಸಿದ ಅವರು, ರೈತದ ಆತ್ಮಹತ್ಯೆಗಳು ಸರ್ಕಾರಗಳೇ ಮಾಡುವ ಕೊಲೆ‌‌ಗೆ ಸಮಾನ. ಆದರೆ ಪ್ರತಿಭಟನೆ ಹತ್ತಿಕ್ಕಲು ಗುಂಡು ಹಾರಿಸಿ ಕೊಲ್ಲುವುದು ರೈತರನ್ನು ಬಗ್ಗುಬಡಿಯುವ ಹುನ್ನಾರ ಎಂದು ಆಕ್ರೋಶ ಹೊರ ಹಾಕಿದರು.

ರೈತ ಮುಖಂಡ ಹಾಗೂ ವಕೀಲ ಸತೀಶ್ ಮಾತನಾಡಿ, ಆದಷ್ಟು ಬೇಗ ಮೇವಿನ‌ ಕೇಂದ್ರಗಳನ್ನ ತೆರೆಯಬೇಕು. ಸ್ವಾಮೀನಾಥನ್ ವರದಿಯನ್ನ ಜಾರಿ ಮಾಡಬೇಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಕೊಬ್ಬರಿ ಖರೀದಿ ನೋಂದಣಿ ಕೇಂದ್ರವನ್ನ ತೆರೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಮೂರ್ತಿ, ಪ್ರಧಾನ ಕಾರ್ಯದರ್ಶಿ ಸತೀಶ್ ಸೇರಿದಂತೆ ರೈತ‌ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

13 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

13 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

13 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

13 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

16 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

20 hours ago