ಮುಂದುವರಿದ ರೈತರ ಮೇಲಿನ ಶೋಷಣೆ : ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯುವ ಎಚ್ಚರಿಕೆ..!?

ದೊಡ್ಡಬಳ್ಳಾಪುರ : ಪಶು ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದು, ರೈತರ ಮೇಲಿನ ಶೋಷಣೆ ನಿಲ್ಲದೆ ಹೋದರೆ ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಸನ್ನ ಅವರು ಎಚ್ಚರಿಕೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಂಎಫ್ ಒಕ್ಕೂಟ ರೈತರ ಪರ ಇಲ್ಲ, ಅಧಿಕಾರಿಗಳ ಪರವಾಗಿದೆ ಎಂದು ಆರೋಪಿಸಿ, ರೈತರ ಸಂಕಷ್ಟಗಳ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿಲ್ಲ. ನಾವು ನಮಗಾಗಿ ಡೈರಿಗೆ ಹಾಲು ಹಾಕುತ್ತಿಲ್ಲ, ಅಧಿಕಾರಿಗಳ ಹೊಟ್ಟೆ ತುಂಬಿಸಲು ಹಾಲು ಹಾಕುತ್ತಿದ್ದೇವೆ ಆಕ್ರೋಶ ವ್ಯಕ್ತಪಡಿಸಿದರು.

ಒಂದು ವೇಳೆ ಕೆಎಂಎಫ್‌ ಮುಚ್ಚುವ ಪರಿಸ್ಥಿತಿ ಏನಾದರೂ ಬಂದರೆ ಅದು ಅಧಿಕಾರಿಗಳ ಬೇಜವಾಬ್ದಾರಿತನದಿಂದಲೇ ಹೊರೆತು ಬೇರೆ ಕಾರಣದಿಂದಲ್ಲ ಎಂದರು.

ರೈತರ ಹೆಸರೇಳಿ ಅಧಿಕಾರಕ್ಕೆ ಬಂದ ಸರಕಾರಗಳು ರೈತರ ಪರ ಇಲ್ಲ, ರಾಜ್ಯದಲ್ಲಿ ಬರಗಾಲ ಎದುರಾಗಿದೆ. ಬರಗಲಕ್ಕೆ ಅನುಗುಣವಾಗಿ ಪಶುಪಾಲನೆಗೆ ಸಿಗಬೇಕಾದ ಸೌಲಭ್ಯ ರೈತರಿಗೆ ಸಿಗುತ್ತಿಲ್ಲ ಎಂದು ಆರೋಪಿಸಿದರು.

ರೈತರ ನಿರಂತರ ಹೋರಾಟದಿಂದ ಎಚ್ಚೆತ್ತ ಕೇಂದ್ರ ಸರ್ಕಾರ ಕಳೆದ 2020-21 ನೇ‌ ಸಾಲಿನಲ್ಲಿ ರೈತ ವಿರೋಧಿ ಕಾಯ್ದೆ ರದ್ದು ಮಾಡಿತು. ಆದರೆ, ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಂಡ ರಾಜ್ಯದ ಯಡಿಯೂರಪ್ಪ ಅವರ ಸರ್ಕಾರ ವಿವಾಧಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲಿಲ್ಲ. ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಅಧಿಕಾರಕ್ಕೆ ಬಂದ ತಕ್ಷಣ ವಿವಾಧಿತ ಕೃಷಿ ಕಾಯ್ದೆ ವಾಪಸ್ ಪಡೆಯುವ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರವೂ ಸಹ ವಾಪಸ್ ತೆಗೆದುಕೊಂಡಿಲ್ಲ. ಇದು ಎಲ್ಲಾ ಪಕ್ಷಗಳು  ಪರೋಕ್ಷವಾಗಿ ಬಹುರಾಷ್ಟ್ರೀಯ ಕಂಪನಿಗಳ ಪರ ಇವೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ದೆಹಲಿಯಲ್ಲಿ ಎಂಎಸ್ ಪಿ ಯನ್ನ ಕಾನೂನುಬದ್ಧ ಮಾಡಬೇಕು, ಹಾಗೂ ರೈತರ 14 ಉತ್ಪನ್ನಗಳನ್ನು ಖರೀದಿ ಮಾಡಬೇಕು ಎಂದು ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ, ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ರೈತರ ಮೇಲೆ ರಬ್ಬರ್ ಗುಂಡು ಹಾರಿಸಿ ಒಬ್ಬ ಯುವಕನನ್ನು ಕೊಂದಿದೆ ಎಂದು ಆರೋಪಿಸಿದ ಅವರು, ರೈತದ ಆತ್ಮಹತ್ಯೆಗಳು ಸರ್ಕಾರಗಳೇ ಮಾಡುವ ಕೊಲೆ‌‌ಗೆ ಸಮಾನ. ಆದರೆ ಪ್ರತಿಭಟನೆ ಹತ್ತಿಕ್ಕಲು ಗುಂಡು ಹಾರಿಸಿ ಕೊಲ್ಲುವುದು ರೈತರನ್ನು ಬಗ್ಗುಬಡಿಯುವ ಹುನ್ನಾರ ಎಂದು ಆಕ್ರೋಶ ಹೊರ ಹಾಕಿದರು.

ರೈತ ಮುಖಂಡ ಹಾಗೂ ವಕೀಲ ಸತೀಶ್ ಮಾತನಾಡಿ, ಆದಷ್ಟು ಬೇಗ ಮೇವಿನ‌ ಕೇಂದ್ರಗಳನ್ನ ತೆರೆಯಬೇಕು. ಸ್ವಾಮೀನಾಥನ್ ವರದಿಯನ್ನ ಜಾರಿ ಮಾಡಬೇಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಕೊಬ್ಬರಿ ಖರೀದಿ ನೋಂದಣಿ ಕೇಂದ್ರವನ್ನ ತೆರೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಮೂರ್ತಿ, ಪ್ರಧಾನ ಕಾರ್ಯದರ್ಶಿ ಸತೀಶ್ ಸೇರಿದಂತೆ ರೈತ‌ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago