ಮುಂದುವರೆದ ಯಾವುದೇ ಜಾತಿಗಳನ್ನು ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು ಎಂದು ಆಗ್ರಹಿಸಿ ಪ್ರತಿಭಟನೆ

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಎಲ್ಲಾ ರೀತಿಯಿಂದ ಮುಂದುವರೆದ ಯಾವುದೇ ಜಾತಿಗಳನ್ನು ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ‌‌ ನಗರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡೆ ಖಂಡಿಸಿ ದಿಕ್ಕಾರದ ಘೋಷಣೆ ಕೂಗಿದರು. ದೇಶದಲ್ಲಿ ಮೀಸಲಾತಿಯನ್ನು ಅವಕಾಶ ವಂಚಿತ ಜಾತಿಗಳಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಸಾಮಾಜಿಕ ಸಮಾನತೆ ಸಾರಿದ ಅಗ್ರಗಣ್ಯ ರಾಜ್ಯಗಳಲ್ಲಿ ಕರ್ನಾಟಕವು ಒಂದು. ಅನೇಕ ಹಿಂದುಳಿದ ವರ್ಗಗಳ ಆಯೋಗಗಳು ವೈಜ್ಞಾನಿಕ ಆಧ್ಯಯನ ನಡೆಸಿ ಮೀಸಲಾತಿಯನ್ನು ಅಚ್ಚುಕಟ್ಟಾಗಿ ಜಾರಿ ಮಾಡಿವೆ. ಆದರೆ, ಕೆಲ ರಾಜಕೀಯ ತೀರ್ಮಾನಗಳಿಂದಾಗಿ ಬಲಾಡ್ಯರು ಮೀಸಲಾತಿ ಪಡೆದು ಶೋಷಿತರ ಪಾಲು ಕಬಳಿಸುತ್ತಿರುವುದು ಶೋಚನೀಯ ಎಂದು ಪ್ರತಿಭಟನಾನಿರತರು ಟೀಕಿಸಿದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆಯನ್ನು ಕೂಡಲೇ ಸರ್ಕಾರ ಬಿಡುಗಡೆ ಮಾಡಬೇಕು. ಅಲ್ಲಿರುವ ವೈಜ್ಞಾನಿಕ ಅಂಕಿ ಅಂಶಗಳ ಪ್ರಕಾರ ನೂತನ ಮೀಸಲಾತಿಯನ್ನು ಪ್ರಕಟಿಸಬೇಕು. ಎಲ್ಲಾ ವಿರೋಧಗಳನ್ನು ನಿರ್ಲಕ್ಷಿಸಿ ಲಿಂಗಾಯಿತ-ಪಂಚಮಸಾಲಿ ಜಾತಿ ಹಾಗೂ ಇತರೆ ಮುಂದುವರೆದ ಜಾತಿಗಳನ್ನು ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಸೇರಿಸುವ ಕ್ರಮ ಕೈಗೊಂಡರೆ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ರಾಜ್ಯಾದ್ಯಾಂತ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕುರುಬ ಸಮಾಜದ ಮುಖಂಡ ಕೆ.ಎಂ.ಕೃಷ್ಣಮೂರ್ತಿ, ಕಾಂಗ್ರೆಸ್ ಒಬಿಸಿ ನಗರಾಧ್ಯಕ್ಷ ಪು.ಮಹೇಶ್, ವಿವಿಧ ಸಮಾಜಗಳ ಮುಖಂಡರಾದ ಶ್ರೀನಿವಾಸ್ ಮೂರ್ತಿ, ಜೆ.ಮುನಿರಾಜು, ಪರಮೇಶ್, ಚಂದ್ರಮೋಹನ್, ಲಾವಣ್ಯ ನಾಗರಾಜ್ ಹಾಗೂ ತಾಲೂಕಿನ ಎಲ್ಲಾ ಹಿಂದುಳಿದ ಜಾತಿಗಳ ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago