ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಎಲ್ಲಾ ರೀತಿಯಿಂದ ಮುಂದುವರೆದ ಯಾವುದೇ ಜಾತಿಗಳನ್ನು ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ನಗರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡೆ ಖಂಡಿಸಿ ದಿಕ್ಕಾರದ ಘೋಷಣೆ ಕೂಗಿದರು. ದೇಶದಲ್ಲಿ ಮೀಸಲಾತಿಯನ್ನು ಅವಕಾಶ ವಂಚಿತ ಜಾತಿಗಳಿಗೆ ನೀಡಬೇಕು ಎಂದು ಒತ್ತಾಯಿಸಿದರು.
ಸಾಮಾಜಿಕ ಸಮಾನತೆ ಸಾರಿದ ಅಗ್ರಗಣ್ಯ ರಾಜ್ಯಗಳಲ್ಲಿ ಕರ್ನಾಟಕವು ಒಂದು. ಅನೇಕ ಹಿಂದುಳಿದ ವರ್ಗಗಳ ಆಯೋಗಗಳು ವೈಜ್ಞಾನಿಕ ಆಧ್ಯಯನ ನಡೆಸಿ ಮೀಸಲಾತಿಯನ್ನು ಅಚ್ಚುಕಟ್ಟಾಗಿ ಜಾರಿ ಮಾಡಿವೆ. ಆದರೆ, ಕೆಲ ರಾಜಕೀಯ ತೀರ್ಮಾನಗಳಿಂದಾಗಿ ಬಲಾಡ್ಯರು ಮೀಸಲಾತಿ ಪಡೆದು ಶೋಷಿತರ ಪಾಲು ಕಬಳಿಸುತ್ತಿರುವುದು ಶೋಚನೀಯ ಎಂದು ಪ್ರತಿಭಟನಾನಿರತರು ಟೀಕಿಸಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆಯನ್ನು ಕೂಡಲೇ ಸರ್ಕಾರ ಬಿಡುಗಡೆ ಮಾಡಬೇಕು. ಅಲ್ಲಿರುವ ವೈಜ್ಞಾನಿಕ ಅಂಕಿ ಅಂಶಗಳ ಪ್ರಕಾರ ನೂತನ ಮೀಸಲಾತಿಯನ್ನು ಪ್ರಕಟಿಸಬೇಕು. ಎಲ್ಲಾ ವಿರೋಧಗಳನ್ನು ನಿರ್ಲಕ್ಷಿಸಿ ಲಿಂಗಾಯಿತ-ಪಂಚಮಸಾಲಿ ಜಾತಿ ಹಾಗೂ ಇತರೆ ಮುಂದುವರೆದ ಜಾತಿಗಳನ್ನು ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಸೇರಿಸುವ ಕ್ರಮ ಕೈಗೊಂಡರೆ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ರಾಜ್ಯಾದ್ಯಾಂತ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕುರುಬ ಸಮಾಜದ ಮುಖಂಡ ಕೆ.ಎಂ.ಕೃಷ್ಣಮೂರ್ತಿ, ಕಾಂಗ್ರೆಸ್ ಒಬಿಸಿ ನಗರಾಧ್ಯಕ್ಷ ಪು.ಮಹೇಶ್, ವಿವಿಧ ಸಮಾಜಗಳ ಮುಖಂಡರಾದ ಶ್ರೀನಿವಾಸ್ ಮೂರ್ತಿ, ಜೆ.ಮುನಿರಾಜು, ಪರಮೇಶ್, ಚಂದ್ರಮೋಹನ್, ಲಾವಣ್ಯ ನಾಗರಾಜ್ ಹಾಗೂ ತಾಲೂಕಿನ ಎಲ್ಲಾ ಹಿಂದುಳಿದ ಜಾತಿಗಳ ಮುಖಂಡರು ಭಾಗವಹಿಸಿದ್ದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…