ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಎಲ್ಲಾ ರೀತಿಯಿಂದ ಮುಂದುವರೆದ ಯಾವುದೇ ಜಾತಿಗಳನ್ನು ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ನಗರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡೆ ಖಂಡಿಸಿ ದಿಕ್ಕಾರದ ಘೋಷಣೆ ಕೂಗಿದರು. ದೇಶದಲ್ಲಿ ಮೀಸಲಾತಿಯನ್ನು ಅವಕಾಶ ವಂಚಿತ ಜಾತಿಗಳಿಗೆ ನೀಡಬೇಕು ಎಂದು ಒತ್ತಾಯಿಸಿದರು.
ಸಾಮಾಜಿಕ ಸಮಾನತೆ ಸಾರಿದ ಅಗ್ರಗಣ್ಯ ರಾಜ್ಯಗಳಲ್ಲಿ ಕರ್ನಾಟಕವು ಒಂದು. ಅನೇಕ ಹಿಂದುಳಿದ ವರ್ಗಗಳ ಆಯೋಗಗಳು ವೈಜ್ಞಾನಿಕ ಆಧ್ಯಯನ ನಡೆಸಿ ಮೀಸಲಾತಿಯನ್ನು ಅಚ್ಚುಕಟ್ಟಾಗಿ ಜಾರಿ ಮಾಡಿವೆ. ಆದರೆ, ಕೆಲ ರಾಜಕೀಯ ತೀರ್ಮಾನಗಳಿಂದಾಗಿ ಬಲಾಡ್ಯರು ಮೀಸಲಾತಿ ಪಡೆದು ಶೋಷಿತರ ಪಾಲು ಕಬಳಿಸುತ್ತಿರುವುದು ಶೋಚನೀಯ ಎಂದು ಪ್ರತಿಭಟನಾನಿರತರು ಟೀಕಿಸಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆಯನ್ನು ಕೂಡಲೇ ಸರ್ಕಾರ ಬಿಡುಗಡೆ ಮಾಡಬೇಕು. ಅಲ್ಲಿರುವ ವೈಜ್ಞಾನಿಕ ಅಂಕಿ ಅಂಶಗಳ ಪ್ರಕಾರ ನೂತನ ಮೀಸಲಾತಿಯನ್ನು ಪ್ರಕಟಿಸಬೇಕು. ಎಲ್ಲಾ ವಿರೋಧಗಳನ್ನು ನಿರ್ಲಕ್ಷಿಸಿ ಲಿಂಗಾಯಿತ-ಪಂಚಮಸಾಲಿ ಜಾತಿ ಹಾಗೂ ಇತರೆ ಮುಂದುವರೆದ ಜಾತಿಗಳನ್ನು ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಸೇರಿಸುವ ಕ್ರಮ ಕೈಗೊಂಡರೆ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ರಾಜ್ಯಾದ್ಯಾಂತ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕುರುಬ ಸಮಾಜದ ಮುಖಂಡ ಕೆ.ಎಂ.ಕೃಷ್ಣಮೂರ್ತಿ, ಕಾಂಗ್ರೆಸ್ ಒಬಿಸಿ ನಗರಾಧ್ಯಕ್ಷ ಪು.ಮಹೇಶ್, ವಿವಿಧ ಸಮಾಜಗಳ ಮುಖಂಡರಾದ ಶ್ರೀನಿವಾಸ್ ಮೂರ್ತಿ, ಜೆ.ಮುನಿರಾಜು, ಪರಮೇಶ್, ಚಂದ್ರಮೋಹನ್, ಲಾವಣ್ಯ ನಾಗರಾಜ್ ಹಾಗೂ ತಾಲೂಕಿನ ಎಲ್ಲಾ ಹಿಂದುಳಿದ ಜಾತಿಗಳ ಮುಖಂಡರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…