ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಉತ್ತರ ಪ್ರದೇಶ ಮೂಲದ ಖುಷಿಕುಮಾರ್ (24) ಎಂದು ಗುರುತಿಸಲಾಗಿದೆ.
ಹರಿಯಾಣದಿಂದ ಬೆಂಗಳೂರಿಗೆ ದ್ವಿಚಕ್ರ ವಾಹನಗಳ ಬಿಡಿಭಾಗಗಳನ್ನು ಸಾಗಿಸುತ್ತಿದ್ದ ಐಚರ್ ವಾಹನವು ಮಂಗಳವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ರಾಷ್ಟ್ರೀಯ ಹೆದ್ದಾರಿ–44ರಲ್ಲಿ ದೇವನಹಳ್ಳಿ ಬೈಪಾಸ್ ಮೂಲಕ ಸಂಚರಿಸುತ್ತಿತ್ತು. ಈ ವೇಳೆ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿ ಏಕಾಏಕಿ ಬ್ರೇಕ್ ಹಾಕಿ ನಿಂತಿದ್ದರಿಂದ, ಐಚರ್ ಚಾಲಕ ವಾಹನವನ್ನು ನಿಯಂತ್ರಿಸಲು ಸಾಧ್ಯವಾಗದೆ ಕಂಟೈನರ್ಗೆ ಭೀಕರವಾಗಿ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿಯ ರಭಸಕ್ಕೆ ಐಚರ್ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಖುಷಿಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಹಾಗೂ ಸಂಚಾರ ಪೊಲೀಸರು ತಕ್ಷಣ ಅವರನ್ನು ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ದಾಖಲಿಸಿದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.
ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ದೇವನಹಳ್ಳಿ ಸಂಚಾರ ಠಾಣೆ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ, ಸಂಚಾರವನ್ನು ಸುಗಮಗೊಳಿಸಿದರು.
ಈ ಸಂಬಂಧ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್ಪೆಕ್ಟರ್ ಮುರಳೀಧರ್ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ ಬಳಿಕ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…