ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಜಾನಪದ ಕಲಾವಿದ ಹಾಗೂ ಹಾಡುಗಾರ ಗೋ.ನಾ ಸ್ವಾಮಿಗೆ ಮಹಾರಾಷ್ಟ್ರದ ಮುಂಬೈ ನಗರದ ಕರ್ನಾಟಕ ಸಂಘ ಅಂಧೇರಿ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಕರ್ನಾಟಕ ವತಿಯಿಂದ ಹೊರನಾಡು ಕನ್ನಡ ಸಂಸ್ಕೃತಿ ಸಂಭ್ರಮ 2024 ಸಾಲಿನಲ್ಲಿ ನೀಡುವ ಜಾನಪದ ಸಿರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ,
ಈ ಪ್ರಶಸ್ತಿಯು ಮುಂದಿನ ತಿಂಗಳು ಜೂನ್ 9.ರಂದು ಭಾನುವಾರ ಮಹಾರಾಷ್ಟ್ರದ ರಾಜಧಾನಿ ಮುಂಬೈನ ರಾಧಾಬಾಯಿ ಟಿ.ಭಂಡಾರಿ ಸಭಾಗೃಹದ ಬಂಟರ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯದ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಚಿವ ಶಿವರಾಜ್ ತಂಗಡಗಿ, ಸಣ್ಣ ನೀರಾವರಿ ಸಚಿವ ಎನ್.ಎಸ್ ಬೋಸರಾಜ್ ಭಾಗವಹಿಸಲಿದ್ದು ಅಧ್ಯಕ್ಷತೆಯನ್ನು ಸದಾಶಿವ ಶೆಟ್ಟಿ ಕುಳೂರು ಕನ್ಯಾನ ವಹಿಸಲಿದ್ದು ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಅನೇಕ ಸಾಹಿತಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…