ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಹಾಗೂ ಕಲ್ಲುಕೋಟೆ ಗ್ರಾಮಕ್ಕೆ ಸೂಕ್ತ ಸರ್ಕಾರಿ ಬಸ್ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿಗಳು KSRTC ಬಸ್ ಡಿಪೊ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು.
ಮಂಗಳವಾರ ಮುಕ್ಕಡಿಘಟ್ಟ ಗ್ರಾಮದ ಸುತ್ತಮುತ್ತಲಿನ ವಿದ್ಯಾರ್ಥಿಗಳು ಜೂನಿಯರ್ ಕಾಲೇಜು ಎದುರಿನ ಬಸ್ ಡಿಪೊಗೆ ಆಗಮಿಸಿ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು.
ತಾಲೂಕಿನ ಮುಕ್ಕಡಿಘಟ್ಟ, ಕಲ್ಲುಕೋಟೆ ಸೇರಿದಂತೆ ಸುತ್ತಲಿನ ಗ್ರಾಮಗಳಿಂದ ದೊಡ್ಡಬಳ್ಳಾಪುರದ ಕಾಲೇಜು, ತೂಬಗೆರೆಯ ಶಾಲೆಗೆ 50-60 ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಆದರೆ, ಗ್ರಾಮಕ್ಕೆ ಸೂಕ್ತ ಬಸ್ ವ್ಯವಸ್ಥೆ ಇಲ್ಲ.
ಕಲ್ಲುಕೋಟೆಯಿಂದ ಸುಮಾರು 2 ಕಿ.ಮೀ. ನಡೆದುಕೊಂಡು ಮುಕ್ಕಡಿಘಟ್ಟಕ್ಕೆ ಬರಬೇಕು. ಅಲ್ಲಿ ಗೂಡ್ಸ್ ಆಟೊ, ಇನ್ನಿತರ ವಾಹನ ಹಿಡಿದು ಶಾಲಾ ಕಾಲೇಜಿಗೆ ಹೋಗಬೇಕಾದ ಅನಿವಾರ್ಯತೆ ಇದೆ.
ಕಳೆದ ಆಗಸ್ಟ್, ಡಿಸೆಂಬರ್ ತಿಂಗಳು ಸೇರಿ ಈವರೆಗೆ ಮೂರು ಬಾರಿ ಬಸ್ ಸೌಲಭ್ಯಕ್ಕೆ ಒತ್ತಾಯಿಸಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಕಲ್ಲುಕೋಟೆಯ ಎಂಎಸ್ ಡಬ್ಲ್ಯು ವಿದ್ಯಾರ್ಥಿ ಅರುಣ್ ಕುಮಾರ್ ದೂರಿದರು.
ಬೆಳಿಗ್ಗೆ ಹೇಗೋ ಶಾಲೆಗೆ ಬರುತ್ತೇವೆ. ಆದರೆ ಸಂಜೆ ಊರಿಗೆ ಹೋಗಬೇಕಾದರೆ ಕತ್ತಲಾಗುತ್ತದೆ. ವಿದ್ಯಾರ್ಥಿನಿಯರು ಭಯಭೀತಿಯಲ್ಲಿ ಓಡಾಡಬೇಕಾದ ಪರಿಸ್ಥಿತಿ ಇದೆ. ಕೆಲ ಪುಂಡರು ಚುಡಾಯಿಸಿದ ಘಟನೆಯೂ ಈ ಹಿಂದೆ ನಡೆದಿದೆ. ವಿದ್ಯಾರ್ಥಿನಿಯರು ಸುರಕ್ಷಿತವಾಗಿ ಮನೆ ತಲುಪುವಂತಾಗಲು ಹಾಗೂ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗುವಂತಾಗಲು ಕೂಡಲೇ ಸಾರಿಗೆ ಸಂಸ್ಥೆ ಬಸ್ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.
ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಪ್ರಿಯಾ ಮಾತನಾಡಿ, ಕಾಲೇಜಿಗೆ ಬಂದು ಹೋಗುವುದೇ ದುಸ್ತರ ಎನಿಸಿದೆ. ಒಬ್ಬೊಬ್ಬರೇ ಭಯದಲ್ಲಿ ಓಡಾಡಬೇಕಾದ ಅನಿವಾರ್ಯವಿದೆ. ಬಸ್ ಬಿಡುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ದೂರಿದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…