ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಹಾಗೂ ಕಲ್ಲುಕೋಟೆ ಗ್ರಾಮಕ್ಕೆ ಸೂಕ್ತ ಸರ್ಕಾರಿ ಬಸ್ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿಗಳು KSRTC ಬಸ್ ಡಿಪೊ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು.
ಮಂಗಳವಾರ ಮುಕ್ಕಡಿಘಟ್ಟ ಗ್ರಾಮದ ಸುತ್ತಮುತ್ತಲಿನ ವಿದ್ಯಾರ್ಥಿಗಳು ಜೂನಿಯರ್ ಕಾಲೇಜು ಎದುರಿನ ಬಸ್ ಡಿಪೊಗೆ ಆಗಮಿಸಿ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು.
ತಾಲೂಕಿನ ಮುಕ್ಕಡಿಘಟ್ಟ, ಕಲ್ಲುಕೋಟೆ ಸೇರಿದಂತೆ ಸುತ್ತಲಿನ ಗ್ರಾಮಗಳಿಂದ ದೊಡ್ಡಬಳ್ಳಾಪುರದ ಕಾಲೇಜು, ತೂಬಗೆರೆಯ ಶಾಲೆಗೆ 50-60 ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಆದರೆ, ಗ್ರಾಮಕ್ಕೆ ಸೂಕ್ತ ಬಸ್ ವ್ಯವಸ್ಥೆ ಇಲ್ಲ.
ಕಲ್ಲುಕೋಟೆಯಿಂದ ಸುಮಾರು 2 ಕಿ.ಮೀ. ನಡೆದುಕೊಂಡು ಮುಕ್ಕಡಿಘಟ್ಟಕ್ಕೆ ಬರಬೇಕು. ಅಲ್ಲಿ ಗೂಡ್ಸ್ ಆಟೊ, ಇನ್ನಿತರ ವಾಹನ ಹಿಡಿದು ಶಾಲಾ ಕಾಲೇಜಿಗೆ ಹೋಗಬೇಕಾದ ಅನಿವಾರ್ಯತೆ ಇದೆ.
ಕಳೆದ ಆಗಸ್ಟ್, ಡಿಸೆಂಬರ್ ತಿಂಗಳು ಸೇರಿ ಈವರೆಗೆ ಮೂರು ಬಾರಿ ಬಸ್ ಸೌಲಭ್ಯಕ್ಕೆ ಒತ್ತಾಯಿಸಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಕಲ್ಲುಕೋಟೆಯ ಎಂಎಸ್ ಡಬ್ಲ್ಯು ವಿದ್ಯಾರ್ಥಿ ಅರುಣ್ ಕುಮಾರ್ ದೂರಿದರು.
ಬೆಳಿಗ್ಗೆ ಹೇಗೋ ಶಾಲೆಗೆ ಬರುತ್ತೇವೆ. ಆದರೆ ಸಂಜೆ ಊರಿಗೆ ಹೋಗಬೇಕಾದರೆ ಕತ್ತಲಾಗುತ್ತದೆ. ವಿದ್ಯಾರ್ಥಿನಿಯರು ಭಯಭೀತಿಯಲ್ಲಿ ಓಡಾಡಬೇಕಾದ ಪರಿಸ್ಥಿತಿ ಇದೆ. ಕೆಲ ಪುಂಡರು ಚುಡಾಯಿಸಿದ ಘಟನೆಯೂ ಈ ಹಿಂದೆ ನಡೆದಿದೆ. ವಿದ್ಯಾರ್ಥಿನಿಯರು ಸುರಕ್ಷಿತವಾಗಿ ಮನೆ ತಲುಪುವಂತಾಗಲು ಹಾಗೂ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗುವಂತಾಗಲು ಕೂಡಲೇ ಸಾರಿಗೆ ಸಂಸ್ಥೆ ಬಸ್ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.
ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಪ್ರಿಯಾ ಮಾತನಾಡಿ, ಕಾಲೇಜಿಗೆ ಬಂದು ಹೋಗುವುದೇ ದುಸ್ತರ ಎನಿಸಿದೆ. ಒಬ್ಬೊಬ್ಬರೇ ಭಯದಲ್ಲಿ ಓಡಾಡಬೇಕಾದ ಅನಿವಾರ್ಯವಿದೆ. ಬಸ್ ಬಿಡುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ದೂರಿದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…