ಮುಕ್ಕಡಿಘಟ್ಟ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳ ಆಗ್ರಹ

ತಾಲೂಕಿನ‌ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಹಾಗೂ ಕಲ್ಲುಕೋಟೆ ಗ್ರಾಮಕ್ಕೆ ಸೂಕ್ತ ಸರ್ಕಾರಿ ಬಸ್ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿಗಳು KSRTC ಬಸ್‌ ಡಿಪೊ ವ್ಯವಸ್ಥಾಪಕರಿಗೆ‌ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು.

ಮಂಗಳವಾರ ಮುಕ್ಕಡಿಘಟ್ಟ ಗ್ರಾಮದ ಸುತ್ತಮುತ್ತಲಿನ ವಿದ್ಯಾರ್ಥಿಗಳು ಜೂನಿಯರ್ ಕಾಲೇಜು ಎದುರಿನ ಬಸ್ ಡಿಪೊಗೆ ಆಗಮಿಸಿ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು.

ತಾಲೂಕಿನ ಮುಕ್ಕಡಿಘಟ್ಟ, ಕಲ್ಲುಕೋಟೆ ಸೇರಿದಂತೆ‌ ಸುತ್ತಲಿನ ಗ್ರಾಮಗಳಿಂದ‌ ದೊಡ್ಡಬಳ್ಳಾಪುರದ ಕಾಲೇಜು, ತೂಬಗೆರೆಯ ಶಾಲೆಗೆ 50-60 ವಿದ್ಯಾರ್ಥಿಗಳು‌ ಸಂಚರಿಸುತ್ತಾರೆ. ಆದರೆ, ಗ್ರಾಮಕ್ಕೆ‌‌ ಸೂಕ್ತ ಬಸ್ ವ್ಯವಸ್ಥೆ ಇಲ್ಲ.

ಕಲ್ಲುಕೋಟೆಯಿಂದ ಸುಮಾರು 2 ಕಿ.ಮೀ. ನಡೆದುಕೊಂಡು‌ ಮುಕ್ಕಡಿಘಟ್ಟಕ್ಕೆ ಬರಬೇಕು. ಅಲ್ಲಿ ಗೂಡ್ಸ್ ಆಟೊ, ಇನ್ನಿತರ ವಾಹನ ಹಿಡಿದು ಶಾಲಾ ಕಾಲೇಜಿಗೆ ಹೋಗಬೇಕಾದ ಅನಿವಾರ್ಯತೆ ಇದೆ.

ಕಳೆದ ಆಗಸ್ಟ್, ಡಿಸೆಂಬರ್ ತಿಂಗಳು ಸೇರಿ ಈವರೆಗೆ ಮೂರು ಬಾರಿ ಬಸ್ ಸೌಲಭ್ಯಕ್ಕೆ ಒತ್ತಾಯಿಸಿ‌ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಕಲ್ಲುಕೋಟೆಯ‌ ಎಂಎಸ್ ಡಬ್ಲ್ಯು ವಿದ್ಯಾರ್ಥಿ‌ ಅರುಣ್ ಕುಮಾರ್‌ ದೂರಿದರು.

ಬೆಳಿಗ್ಗೆ ಹೇಗೋ ಶಾಲೆಗೆ ಬರುತ್ತೇವೆ. ಆದರೆ ಸಂಜೆ ಊರಿಗೆ ಹೋಗಬೇಕಾದರೆ ಕತ್ತಲಾಗುತ್ತದೆ. ವಿದ್ಯಾರ್ಥಿನಿಯರು ಭಯಭೀತಿಯಲ್ಲಿ ಓಡಾಡಬೇಕಾದ ಪರಿಸ್ಥಿತಿ‌ ಇದೆ. ಕೆಲ ಪುಂಡರು‌ ಚುಡಾಯಿಸಿದ‌ ಘಟನೆಯೂ ಈ ಹಿಂದೆ ನಡೆದಿದೆ. ವಿದ್ಯಾರ್ಥಿನಿಯರು ಸುರಕ್ಷಿತವಾಗಿ ಮನೆ ತಲುಪುವಂತಾಗಲು ಹಾಗೂ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗುವಂತಾಗಲು ಕೂಡಲೇ ಸಾರಿಗೆ ಸಂಸ್ಥೆ ಬಸ್ ವ್ಯವಸ್ಥೆ‌ ಮಾಡಬೇಕು ಎಂದು‌ ಮನವಿ‌ ಮಾಡಿದರು.

ಪ್ಯಾರಾ‌ಮೆಡಿಕಲ್ ವಿದ್ಯಾರ್ಥಿನಿ ಪ್ರಿಯಾ‌ ಮಾತನಾಡಿ, ಕಾಲೇಜಿಗೆ ಬಂದು ಹೋಗುವುದೇ ದುಸ್ತರ‌ ಎನಿಸಿದೆ. ಒಬ್ಬೊಬ್ಬರೇ ಭಯದಲ್ಲಿ ಓಡಾಡಬೇಕಾದ ಅನಿವಾರ್ಯವಿದೆ. ಬಸ್ ಬಿಡುವಂತೆ ಹಲವು ಬಾರಿ‌ ಮನವಿ‌ ಮಾಡಿದರೂ ಅಧಿಕಾರಿಗಳು‌ ಸ್ಪಂದಿಸಿಲ್ಲ‌‌ ಎಂದು‌ ದೂರಿದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago