ಮುಕ್ಕಡಿಘಟ್ಟ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳ ಆಗ್ರಹ

ತಾಲೂಕಿನ‌ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಹಾಗೂ ಕಲ್ಲುಕೋಟೆ ಗ್ರಾಮಕ್ಕೆ ಸೂಕ್ತ ಸರ್ಕಾರಿ ಬಸ್ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿಗಳು KSRTC ಬಸ್‌ ಡಿಪೊ ವ್ಯವಸ್ಥಾಪಕರಿಗೆ‌ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು.

ಮಂಗಳವಾರ ಮುಕ್ಕಡಿಘಟ್ಟ ಗ್ರಾಮದ ಸುತ್ತಮುತ್ತಲಿನ ವಿದ್ಯಾರ್ಥಿಗಳು ಜೂನಿಯರ್ ಕಾಲೇಜು ಎದುರಿನ ಬಸ್ ಡಿಪೊಗೆ ಆಗಮಿಸಿ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು.

ತಾಲೂಕಿನ ಮುಕ್ಕಡಿಘಟ್ಟ, ಕಲ್ಲುಕೋಟೆ ಸೇರಿದಂತೆ‌ ಸುತ್ತಲಿನ ಗ್ರಾಮಗಳಿಂದ‌ ದೊಡ್ಡಬಳ್ಳಾಪುರದ ಕಾಲೇಜು, ತೂಬಗೆರೆಯ ಶಾಲೆಗೆ 50-60 ವಿದ್ಯಾರ್ಥಿಗಳು‌ ಸಂಚರಿಸುತ್ತಾರೆ. ಆದರೆ, ಗ್ರಾಮಕ್ಕೆ‌‌ ಸೂಕ್ತ ಬಸ್ ವ್ಯವಸ್ಥೆ ಇಲ್ಲ.

ಕಲ್ಲುಕೋಟೆಯಿಂದ ಸುಮಾರು 2 ಕಿ.ಮೀ. ನಡೆದುಕೊಂಡು‌ ಮುಕ್ಕಡಿಘಟ್ಟಕ್ಕೆ ಬರಬೇಕು. ಅಲ್ಲಿ ಗೂಡ್ಸ್ ಆಟೊ, ಇನ್ನಿತರ ವಾಹನ ಹಿಡಿದು ಶಾಲಾ ಕಾಲೇಜಿಗೆ ಹೋಗಬೇಕಾದ ಅನಿವಾರ್ಯತೆ ಇದೆ.

ಕಳೆದ ಆಗಸ್ಟ್, ಡಿಸೆಂಬರ್ ತಿಂಗಳು ಸೇರಿ ಈವರೆಗೆ ಮೂರು ಬಾರಿ ಬಸ್ ಸೌಲಭ್ಯಕ್ಕೆ ಒತ್ತಾಯಿಸಿ‌ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಕಲ್ಲುಕೋಟೆಯ‌ ಎಂಎಸ್ ಡಬ್ಲ್ಯು ವಿದ್ಯಾರ್ಥಿ‌ ಅರುಣ್ ಕುಮಾರ್‌ ದೂರಿದರು.

ಬೆಳಿಗ್ಗೆ ಹೇಗೋ ಶಾಲೆಗೆ ಬರುತ್ತೇವೆ. ಆದರೆ ಸಂಜೆ ಊರಿಗೆ ಹೋಗಬೇಕಾದರೆ ಕತ್ತಲಾಗುತ್ತದೆ. ವಿದ್ಯಾರ್ಥಿನಿಯರು ಭಯಭೀತಿಯಲ್ಲಿ ಓಡಾಡಬೇಕಾದ ಪರಿಸ್ಥಿತಿ‌ ಇದೆ. ಕೆಲ ಪುಂಡರು‌ ಚುಡಾಯಿಸಿದ‌ ಘಟನೆಯೂ ಈ ಹಿಂದೆ ನಡೆದಿದೆ. ವಿದ್ಯಾರ್ಥಿನಿಯರು ಸುರಕ್ಷಿತವಾಗಿ ಮನೆ ತಲುಪುವಂತಾಗಲು ಹಾಗೂ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗುವಂತಾಗಲು ಕೂಡಲೇ ಸಾರಿಗೆ ಸಂಸ್ಥೆ ಬಸ್ ವ್ಯವಸ್ಥೆ‌ ಮಾಡಬೇಕು ಎಂದು‌ ಮನವಿ‌ ಮಾಡಿದರು.

ಪ್ಯಾರಾ‌ಮೆಡಿಕಲ್ ವಿದ್ಯಾರ್ಥಿನಿ ಪ್ರಿಯಾ‌ ಮಾತನಾಡಿ, ಕಾಲೇಜಿಗೆ ಬಂದು ಹೋಗುವುದೇ ದುಸ್ತರ‌ ಎನಿಸಿದೆ. ಒಬ್ಬೊಬ್ಬರೇ ಭಯದಲ್ಲಿ ಓಡಾಡಬೇಕಾದ ಅನಿವಾರ್ಯವಿದೆ. ಬಸ್ ಬಿಡುವಂತೆ ಹಲವು ಬಾರಿ‌ ಮನವಿ‌ ಮಾಡಿದರೂ ಅಧಿಕಾರಿಗಳು‌ ಸ್ಪಂದಿಸಿಲ್ಲ‌‌ ಎಂದು‌ ದೂರಿದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

6 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

10 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

10 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

13 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago