ವಾಸ್ತು ನೆಪದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಸಿಎಂ ಸಿದ್ದರಾಮಯ್ಯ ಇಂದು ಓಪನ್ ಮಾಡಿಸಿ ಮೂಢನಂಬಿಕೆಗೆ ಬ್ರೇಕ್ ಹಾಕಿದ್ದಾರೆ.
ಅನ್ನಭಾಗ್ಯ ಯೋಜನೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿ ಈ ಕುರಿತು ಪ್ರಶ್ನೆ ಮಾಡಿದಾಗ ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ, ಕೂಡಲೇ ಬಾಗಿಲು ತೆರೆಯಲು ಸಿಬ್ಬಂದಿಗೆ ಹೇಳಿ ಆ ಬಾಗಿಲಿನಿಂದಲೇ ಸಭೆಗೆ ಹೋದ ಸಿಎಂ ಸಿದ್ದರಾಮಯ್ಯ.
ಜನರ ಬಗ್ಗೆ ಕಾಳಜಿ, ನಡತೆಯಲ್ಲಿ ಪ್ರಾಮಾಣಿಕತೆ,
ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ ಎಂದು ಟ್ವಿಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ,
ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ.
ಕೊಠಡಿಯೊಳಗೆ ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದಕ್ಕಿಂತ ಉತ್ತಮ ವಾಸ್ತು ಬೇರಿಲ್ಲ. ನಡೆ – ನುಡಿ ಶುದ್ಧವಿದ್ದರೆ ಮತ್ತೆಲ್ಲವೂ ಶುಭದಾಯಕವಾಗಿರಲಿದೆ. ಜನತೆಯ ಆಶೀರ್ವಾದ ಇರಲಿ ಎಂದ ಸಿಎಂ ಸಿದ್ದರಾಮಯ್ಯ.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…